ಮಾಜಿ ಸಿಎಂ ಎಸ್‌ ಎಂ ಕೃಷ್ಣ ಆಸ್ಪತ್ರೆಗೆ ದಾಖಲು!

0
46

ಬೆಂಗಳೂರು: ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಮಾಜಿ ಸಿಎಂ SM ಕೃಷ್ಣ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಾಗಿದ್ದರು. ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಆದರೆ ಇನ್ನು ಎರಡು ಅಥವಾ ಮೂರು ದಿನ ಆಸ್ಪತ್ರೆಯಲ್ಲಿ ಇರಲಿದ್ದು ಬಳಿಕ ಡಿಶ್ಚಾರ್ಜ್ ಆಗಲಿದ್ದಾರೆ.
ಇತ್ತೀಚೆಗೆ ತೀವ್ರ ಜ್ವರದಿಂದ ಬಳಲಿದ್ದ ಎಸ್ಎಂ ಕೃಷ್ಣ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದರು. ಇದೀಗ ಮತ್ತೆ ತೀವ್ರ ಶೀತ ಮತ್ತು ಜ್ವರದಿಂದಾಗಿ ಬಳಲಿದ್ದು, ಹೀಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.