ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ!

Date:

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ!

ಆನೇಕಲ್: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಗೊಲ್ಲಹಳ್ಳಿ ಬಳಿ ನಡೆದಿದೆ. ಮಂಜ ಅಲಿಯಾಸ್ ನೇಪಾಳಿ ಮಂಜ ಹತ್ಯೆಯಾದ ರೌಡಿಶೀಟರ್‌ ಎಂದು ಗುರುತಿಸಲಾಗಿದೆ, ಹಬ್ಬದ ದಿನ ಎಣ್ಣೆ ಪಾರ್ಟಿಗೆ ಹೋಗಿದ್ದ ವೇಳೆ ರಡು ಬೈಕ್‍ನಲ್ಲಿ ಬಂದ ಹಂತಕರ ಗುಂಪು ಆತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಹಳೇ ದ್ವೇಷದ ಹಿನ್ನೆಲೆ ಹೆಬ್ಬಗೋಡಿ ರೌಡಿಶೀಟರ್ ಜಗ್ಗ ಅಲಿಯಾಸ್ ಜಗದೀಶ್ ಮತ್ತವನ ಗ್ಯಾಂಗ್ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದ್ದು, ಲಾಂಗು ಮಚ್ಚುಗಳಿಂದ ತಲೆ, ಹೊಟ್ಟೆ, ಎದೆ ಕೈಗಳು ಹೀಗೆ ಸಿಕ್ಕ ಸಿಕ್ಕ ಕಡೆ ಹಲ್ಲೆ ನಡೆಸಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ.
ಎರಡು ಕೊಲೆ ಸೇರಿದಂತೆ ಕೊಲೆ ಯತ್ನ, ದರೋಡೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಮೃತ ನೇಪಾಳಿ ಮಂಜ ಪ್ರಮುಖ ಆರೋಪಿಯಾಗಿದ್ದ. ಎರಡು ಬಾರಿ ಗೂಂಡಾ ಕಾಯ್ದೆ ಅಡಿ ಆತನನ್ನು ಬಂಧಿಸಲಾಗಿತ್ತು. ಈ ಸಂಬಂಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...