ಮಾಲೆಂಗಾವ್ ಸ್ಫೋಟ ಪ್ರಕರಣ: ಪ್ರಗ್ಯಾ ಠಾಕೂರ್ ಸೇರಿ ಎಲ್ಲ ಆರೋಪಿಗಳು ಖುಲಾಸೆ!

Date:

ಮಾಲೆಂಗಾವ್ ಸ್ಫೋಟ ಪ್ರಕರಣ: ಪ್ರಗ್ಯಾ ಠಾಕೂರ್ ಸೇರಿ ಎಲ್ಲ ಆರೋಪಿಗಳು ಖುಲಾಸೆ!

ನವದೆಹಲಿ: 2008ರ ಮಾಲೇಗಾಂವ್ ಸ್ಫೋಟ ಪ್ರಕರಣದ ತೀರ್ಪು ಇಂದು ಪ್ರಕಟಗೊಂಡಿದ್ದು, ಈ ಘಟನೆಯಲ್ಲಿ 6 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯ ವಿಶೇಷ ನ್ಯಾಯಾಲಯವು ಇಂದು ತೀರ್ಪು ಪ್ರಕಟಿಸಿದ್ದು, ಬಿಜೆಪಿಯ ಮಾಜಿ ಸಂಸದೆ ಪ್ರಜ್ಞಾ ಠಾಕೂರ್ ಅವರನ್ನು ಖುಲಾಸೆಗೊಳಿಸಲಾಗಿದೆ.
ಏಪ್ರಿಲ್ 19ರಂದು ಪ್ರಕರಣದ ವಿಚಾರಣೆ ಮುಗಿಸಿದ್ದ ಕೋರ್ಟ್, ಮೇ 8ರಂದು ಕೋರ್ಟ್ನಲ್ಲಿ ಹಾಜರಿರುವಂತೆ ಆರೋಪಿಗಳಿಗೆ ಸೂಚಿಸಿತ್ತು. ನ್ಯಾಯಾಧೀಶರಾದ ಎ.ಕೆ.ಲಾಹೋಟಿ ಅವರು, ತೀರ್ಪು ಪ್ರಕಟಿಸಲು ಹೆಚ್ಚಿನ ಸಮಯ ಬೇಕು. ಜುಲೈ 31ರಂದು ಎಲ್ಲಾ ಆರೋಪಿಗಳು ಹಾಜರಿರಬೇಕು’ ಎಂದು ಆರೋಪಿಗಳಿಗೆ ತಿಳಿಸಿದ್ದರು.
ಈ ಪ್ರಕರಣದಲ್ಲಿ ಮುಂಬೈನ ವಿಶೇಷ ಎನ್ಐಎ ನ್ಯಾಯಾಲಯವು ಮಾಜಿ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್ ಮತ್ತು ಮಾಜಿ ಸೇನಾ ಅಧಿಕಾರಿ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಶ್ರೀಕಾಂತ್ ಪುರೋಹಿತ್ ಸೇರಿದಂತೆ ಎಲ್ಲಾ ಏಳು ಮಂದಿ ಆರೋಪಿಗಳನ್ನು ಸೂಕ್ತ ಸಾಕ್ಷ್ಯಾಧಾರಗಳು ಇಲ್ಲದ ಕಾರಣ ನಿರಪರಾಧಿ ಎಂದು ಘೋಷಿಸಿದೆ.

Share post:

Subscribe

spot_imgspot_img

Popular

More like this
Related

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು!

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು! ಉಗುರು ಕಚ್ಚುವುದು...

ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಕಳಪೆ: ಬೆಂಗಳೂರು, ಮಂಗಳೂರು ನಗರವಾಸಿಗಳಿಗೆ ಆತಂಕ

ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಕಳಪೆ: ಬೆಂಗಳೂರು, ಮಂಗಳೂರು ನಗರವಾಸಿಗಳಿಗೆ ಆತಂಕ ಬೆಂಗಳೂರು: ಕಳೆದ...

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ ಮೋದಿ ವಾಗ್ದಾಳಿ

ಬಿಜೆಪಿ ಜನರ ಮೊದಲ ಆಯ್ಕೆ, ಕಾಂಗ್ರೆಸ್ ದೇಶದ ವಿಶ್ವಾಸ ಕಳೆದುಕೊಂಡಿದೆ: ಪ್ರಧಾನಿ...

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್ ಮೇಲೆ ಹಲ್ಲೆ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಅಟ್ಟಹಾಸ: ಕ್ಷುಲ್ಲಕ ಕಾರಣಕ್ಕೆ ಸಹಾಯಕ ಜೈಲರ್...