ಮಾವಿನ ಎಲೆಗಳಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನವಿದೆ ಗೊತ್ತಾ..?

Date:

ಮಾವಿನ ಎಲೆಗಳಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನವಿದೆ ಗೊತ್ತಾ..?

ಮಾವಿನಹಣ್ಣಿನಲ್ಲಿ ಮಾತ್ರವಲ್ಲದೆ, ಮಾವಿನ ಎಲೆಗಳು ಕೂಡ ದೊಡ್ಡ ಗಿಡಮೂಲಿಕೆಯಾಗಿದೆ. ಮಾವಿನ ಎಲೆಗಳು ಉತ್ತಮವಾದ ಔಷಧೀಯ ಗುಣಗಳಿಂದ ತುಂಬಿದೆ.ಮಾವಿನ ಎಲೆಗಳ ಪ್ರಯೋಜನಗಳು ತುಂಬಾ ವೈವಿಧ್ಯಮಯ ಮತ್ತು ವ್ಯಾಪಕವಾಗಿದ್ದು,ಇದಕ್ಕೆ ಔಷಧದಲ್ಲಿ ಅಪಾರ ಪ್ರಾಮುಖ್ಯತೆ ನೀಡಲಾಗಿದೆ. ಮಾವಿನ ಎಲೆಗಳು ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಕಾರಿ ಎಂಬುದನ್ನು ತಿಳಿಯಿರಿ.
ಕ್ಯಾನ್ಸರ್ ಮತ್ತು ಗಡ್ಡೆಗಳು ಬೆಳೆಯದಂತೆ ತಡೆಯುತ್ತದೆ ಮಾವಿನ ಎಲೆಗಳಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿರುತ್ತದೆ. ದೇಹದಿಂದ ಸ್ವತಂತ್ರ ರಾಡಿಕಲ್ಗಳನ್ನು ತೆಗೆದುಹಾಕುವ ಮೂಲಕ ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯುತ್ತದೆ. ಇದು ಕ್ಯಾನ್ಸರ್, ಗಡ್ಡೆಗಳಂತಹ ಮಾರಣಾಂತಿಕ ಖಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ದೇಹದಿಂದ ವಿಷಕಾರಿ ವಸ್ತುಗಳನ್ನು ತೆಗೆದುಹಾಕುವುದರ ಮೂಲಕ ಆರೋಗ್ಯವನ್ನು ಸುಧಾರಿಸುತ್ತದೆ.
ಕೂದಲು ಮತ್ತು ಚರ್ಮಕ್ಕೆ ಪ್ರಯೋಜನಕಾರಿ ಮಾವಿನ ಎಲೆಗಳು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿರುತ್ತದೆ. ದೇಹದಲ್ಲಿನ ಸೋಂಕು ನಿವಾರಣೆಗೆ ಸಹಾಯಕವಾಗಿದೆ. ಇದು ವಯಸ್ಸಿನನಿಂದ ಉಂಟಾಗುವ ಚರ್ಮದ ಮಡಿಕೆಯನ್ನು ನಿವಾರಿಸಲು ಸಹಾಯಕವಾಗಿದೆ. ಮಾವಿನ ಎಲೆಗಳು ವಿಟಮಿನ್ ಎ ಮತ್ತು ಸಿ ಯಿಂದ ಸಮೃದ್ಧವಾಗಿದೆ ಹಾಗೂ ಕೂದಲು ಉದುರುವ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಬಹುದಾಗಿದೆ. ಮಾವಿನ ಎಲೆಗಳ ಪೇಸ್ಟ್ ತಯಾರಿಸುವ ಮೂಲಕ ನಿಮ್ಮ ತಲೆ ಕೂದಲು ಬೆಳವಣಿಗೆಗೆ ಬಳಕೆ ಮಾಡಬಹುದು. ಇದರಿಂದ ಕೂದಲು ದಪ್ಪ ಮತ್ತು ಕಪ್ಪಾಗಿ ಬೆಳೆಯಲು ಸಹಾಯ ಮಾಡುತ್ತದೆ.
ತೂಕ ನಷ್ಟಕ್ಕೆ ಸಹಾಯಕ ಮಾವಿನ ಎಲೆಗಳು ಅನೇಕ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಇದು ದೇಹದಲ್ಲಿನ ಹೆಚ್ಚುವರಿ ಕೊಬ್ಬು ನಿವಾರಣೆಗೆ ಸಹಾಯಕವಾಗಿದೆ. ನೀವು ತೂಕ ಇಳಿಸಿಕೊಳ್ಳಲು ಬಯಸಿದರೆ ನಿಮ್ಮ ಆಹಾರದಲ್ಲಿ ಮಾವಿನ ಎಲೆಗಳನ್ನು ಬಳಸಿ.
ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಪರಿಹಾರ ಕಂಡುಕೊಳ್ಳಲು ಮಾವಿನ ಎಲೆಗಳ ಬಳಕೆ ಉತ್ತಮ. ಜತೆಗೆ ಮಾವಿನ ಎಲೆಗಳನ್ನು ಬಳಸುವುದರ ಮೂಲಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದಾಗಿದೆ. ಮಧುಮೇಹ ನಿಯಂತ್ರಣಕ್ಕೂ ಸಹ ಮಾವಿನ ಎಲೆಗಳು ಸಹಾಯ ಮಾಡುತ್ತವೆ. ದೇಹದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಮಾವಿನ ಎಲೆಗಳನ್ನು ಬಳಸುತ್ತಾರೆ.
ಸೂಚನೆ: ಆರೋಗ್ಯದಲ್ಲಿ ಏನೇ ಏರು-ಪೇರು ಉಂಟಾದರೂ ತಕ್ಷಣ ವೈದ್ಯರ ಸಮಹೆಯನ್ನು ಪಡೆದುಕೊಳ್ಳಿ. ನಿಮ್ಮ ಆಹಾರ ಕ್ರಮವೂ ಸಹ ವೈದ್ಯರು ಸೂಚಿಸಿದಂತೆಯೇ ಇರಲಿ. ಆರೋಗ್ಯಕ್ಕೆ ತಕ್ಕಂತೆ ವೈದ್ಯರು ಸಲಹೆ ನೀಡುವ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಪಾಲಿಸಿ. ಈ ಮೂಲಕ ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದಾಗಿದೆ.

Share post:

Subscribe

spot_imgspot_img

Popular

More like this
Related

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ ಬೆಂಗಳೂರು:...

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ!

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ! ದಿನನಿತ್ಯದ ಆಹಾರದಲ್ಲಿ ತರಕಾರಿಗಳ ಬಳಕೆ ಅನಿವಾರ್ಯ....

ಬ್ರಹ್ಮಚಾರಿಣಿಯ ಪೂಜಾ ವಿಧಾನ !

ನವರಾತ್ರಿಯ ಎರಡನೇ ದಿನದಲ್ಲಿ ಬ್ರಹ್ಮಚಾರಿಣಿ ದೇವಿಯನ್ನು ಆರಾಧಿಸಲಾಗುತ್ತದೆ.ಇವರು ತಪಸ್ಸು, ಧೈರ್ಯ, ಶ್ರದ್ಧೆ...

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ ಬೆಂಗಳೂರು:-...