ಮಿಥಾಲಿ ಹೋರಾಟ ವ್ಯರ್ಥ

Date:

ಲಕ್ನೋ: ನಾಯಕಿ ಮಿಥಾಲಿ ರಾಜ್ ಅವರ ಅರ್ಧ ಶತಕದ ಹೋರಾಟದ ಹೊರತಾಗಿಯೂ ದಕ್ಷಿಣ ಆಫ್ರಿಕಾ ವನಿತೆಯರ ವಿರುದ್ಧದ 5ನೇ ಏಕದಿನ ಪಂದ್ಯದಲ್ಲಿ 5 ವಿಕೆಟ್ ಸೋಲಿನೊಂದಿಗೆ ಭಾರತದ ವನಿತೆಯರು ಸತತ 3ನೇ ಸೋಲು ಕಂಡಿದ್ದಾರೆ. ಇದರೊಂದಿಗೆ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ 4-1 ಹಿನ್ನಡೆ ಅನುಭವಿಸಿದೆ.

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಭಾರತದ ವನಿತಾ ತಂಡ, ಪ್ರಿಯಾ ಪೂನಿಯಾ 18, ಸ್ಮೃತಿ ಮಂಧಾನ 18, ಪೂನಂ ರಾವತ್ 10, ಹರ್ಮನ್‌ಪ್ರೀತ್ ಕೌರ್ (ಗಾಯಾಳಾಗಿ ಹೊರಗೆ) 30, ಮಿಥಾಲಿ ರಾಜ್ ಅಜೇಯ 79, ಜೂಲನ್ ಗೋಸ್ವಾಮಿ 5, ಮೋನಿಕಾ ಪಾಟೆಲ್ 9 ರನ್‌ನೊಂದಿಗೆ 49.3 ಓವರ್‌ಗೆ 9 ವಿಕೆಟ್ ಕಳೆದು 188 ರನ್ ಗಳಿಸಿತು.

ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ವನಿತಾ ತಂಡ, ನಾಯಕಿ ಸೂನೆ ಲೂಸ್ 10, ಮಿಗ್ನಾನ್ ಡು ಪ್ರೀಜ್ 57, ಆನ್ ಬಾಷ್ 58, ಮಾರಿಜನ್ನೆ ಕಾಪ್ 36, ನಾಡಿನ್ ಡಿ ಕ್ಲರ್ಕ್ 19 ರನ್‌ ಕೊಡುಗೆಯೊಂದಿಗೆ 48.2 ಓವರ್‌ನಲ್ಲಿ 5 ವಿಕೆಟ್ ನಷ್ಟದಲ್ಲಿ 189 ರನ್ ಗಳಿಸಿ ಗೆಲುವನ್ನಾಚರಿಸಿತು.

ಭಾರತದ ಮಹಿಳಾ ತಂಡದ ಇನ್ನಿಂಗ್ಸ್‌ನಲ್ಲಿ ದಕ್ಷಿಣ ಆಫ್ರಿಕಾ ವನಿತಾ ತಂಡದ ನಾಡಿನ್ ಡಿ ಕ್ಲಾರ್ಕ್ 3, ಮಾರಿಜನ್ನೆ ಕಾಪ್ 1, ನೊಂಡುಮಿಸೊ ಶಾಂಗೇಸ್ 2, ತುಮಿ ಸೆಖುಖುನೆ 2 ವಿಕೆಟ್‌ನೊಂದಿಗೆ ಗಮನ ಸೆಳೆದರೆ, ದಕ್ಷಿಣ ಆಫ್ರಿಕಾ ಇನ್ನಿಂಗ್ಸ್‌ನಲ್ಲಿ ಭಾರತದ ರಾಜೇಶ್ವರಿ ಗಾಯಕ್ವಾಡ್ 3 ವಿಕೆಟ್‌ ಪಡೆದರು.

 

Share post:

Subscribe

spot_imgspot_img

Popular

More like this
Related

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ!

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್...

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...