ಮುಂಗಾರಿಗೆ ಕ್ಷಣಗಣನೆ; ರಾಜ್ಯದ ಎಲ್ಲೆಲ್ಲಿ ಬೀಳಲಿದೆ ಮಳೆ?

Date:

ರಾಜ್ಯದಲ್ಲಿ ಮುಂಗಾರು ಆಗಮನಕ್ಕೆ ಕ್ಷಣಗಣನೆ ಆರಂಭವಾಗಿದೆ, ರಾಜ್ಯದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಜೂನ್ 6 ಅಥವಾ 7 ರಂದು ಮುಂಗಾರು ರಾಜ್ಯವನ್ನು ಪ್ರವೇಶಿಸಲಿದೆ ಎಂದು ಹವಾಮಾನ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು, ಶಿವಮೊಗ್ಗ ಸೇರಿ ವಿವಿಧೆಡೆ ಮಳೆಯಾಗಲಿದೆ.

ಈ ಬಾರಿ ಸ್ವಲ್ಪ ತಡವಾಗಿ ಮುಂಗಾರು ಮಳೆ ಕರ್ನಾಟಕ ಪ್ರವೇಶ ಮಾಡಲಿದೆ.ಮುಂದಿನ ವಾರ ರಾಜ್ಯದಲ್ಲಿ ಮುಂಗಾರು ಮಳೆಯ ಸಿಂಚನ ಆರಂಭವಾಗಲಿದೆ. ಈ ವರ್ಷ ಹೆಚ್ಚು ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ.

ಜೂನ್​ ತಿಂಗಳ ಮಧ್ಯಭಾಗದಿಂದ ಆಚೆಗೆ ಮುಂಗಾರು ಮಳೆಯ ಪ್ರಭಾವ ಹೆಚ್ಚಾಗುವ ಸಾಧ್ಯತೆ ಇದೆ. ಜೂನ್​ ತಿಂಗಳ ಮೂರನೇ ವಾರದಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಆದರೆ ಜೂನ್​ ತಿಂಗಳ ಮೊದಲ ಎರಡು ವಾರಗಳಲ್ಲಿ ಮುಂಗಾರು ಮಳೆಯ ಪ್ರಭಾವ ಕಡಿಮೆ ಇರುತ್ತದೆ.

ಜೂನ್​ ಮೊದಲಾರ್ಧದಲ್ಲಿ ಮುಂಗಾರು ನಿಧಾನಗತಿಯಲ್ಲಿ ಇರುತ್ತದೆ. ಕಳೆದ ತಿಂಗಳು ಮೇ 21 ಮತ್ತು 27ರ ನಡುವೆ ಎರಡು ಚಂಡಮಾರುತಗಳು ಅಬ್ಬರಿಸಿದ್ದವು. ತುಕ್ತೆ ಮತ್ತು ಯಾಸ್ ಚಂಡಮಾರುತದ ಪ್ರಭಾವ ಕರ್ನಾಟಕದ ಮೇಲೂ ಬೀರಿತ್ತು. ಇದರ ಪರಿಣಾಮವಾಗಿ ಮೇ 31 ರಿಂದ ಜೂನ್​ 3ರ ನಡುವೆ ಕೇರಳಕ್ಕೆ ಮುಂಗಾರು ಮಳೆ ಪ್ರವೇಶ ಆಗುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ನಿರೀಕ್ಷಿಸಿತು. ಅದೇ ರೀತಿಯಾಗಿ ನಿನ್ನೆ ಕೇರಳಕ್ಕೆ ಮುಂಗಾರು ಮಳೆ ಕಾಲಿಟ್ಟಿದೆ.

 

Share post:

Subscribe

spot_imgspot_img

Popular

More like this
Related

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ!

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್...

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...