ಮುಂಗಾರಿಗೆ ಕ್ಷಣಗಣನೆ; ರಾಜ್ಯದ ಎಲ್ಲೆಲ್ಲಿ ಬೀಳಲಿದೆ ಮಳೆ?

Date:

ರಾಜ್ಯದಲ್ಲಿ ಮುಂಗಾರು ಆಗಮನಕ್ಕೆ ಕ್ಷಣಗಣನೆ ಆರಂಭವಾಗಿದೆ, ರಾಜ್ಯದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಜೂನ್ 6 ಅಥವಾ 7 ರಂದು ಮುಂಗಾರು ರಾಜ್ಯವನ್ನು ಪ್ರವೇಶಿಸಲಿದೆ ಎಂದು ಹವಾಮಾನ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು, ಶಿವಮೊಗ್ಗ ಸೇರಿ ವಿವಿಧೆಡೆ ಮಳೆಯಾಗಲಿದೆ.

ಈ ಬಾರಿ ಸ್ವಲ್ಪ ತಡವಾಗಿ ಮುಂಗಾರು ಮಳೆ ಕರ್ನಾಟಕ ಪ್ರವೇಶ ಮಾಡಲಿದೆ.ಮುಂದಿನ ವಾರ ರಾಜ್ಯದಲ್ಲಿ ಮುಂಗಾರು ಮಳೆಯ ಸಿಂಚನ ಆರಂಭವಾಗಲಿದೆ. ಈ ವರ್ಷ ಹೆಚ್ಚು ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ.

ಜೂನ್​ ತಿಂಗಳ ಮಧ್ಯಭಾಗದಿಂದ ಆಚೆಗೆ ಮುಂಗಾರು ಮಳೆಯ ಪ್ರಭಾವ ಹೆಚ್ಚಾಗುವ ಸಾಧ್ಯತೆ ಇದೆ. ಜೂನ್​ ತಿಂಗಳ ಮೂರನೇ ವಾರದಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಆದರೆ ಜೂನ್​ ತಿಂಗಳ ಮೊದಲ ಎರಡು ವಾರಗಳಲ್ಲಿ ಮುಂಗಾರು ಮಳೆಯ ಪ್ರಭಾವ ಕಡಿಮೆ ಇರುತ್ತದೆ.

ಜೂನ್​ ಮೊದಲಾರ್ಧದಲ್ಲಿ ಮುಂಗಾರು ನಿಧಾನಗತಿಯಲ್ಲಿ ಇರುತ್ತದೆ. ಕಳೆದ ತಿಂಗಳು ಮೇ 21 ಮತ್ತು 27ರ ನಡುವೆ ಎರಡು ಚಂಡಮಾರುತಗಳು ಅಬ್ಬರಿಸಿದ್ದವು. ತುಕ್ತೆ ಮತ್ತು ಯಾಸ್ ಚಂಡಮಾರುತದ ಪ್ರಭಾವ ಕರ್ನಾಟಕದ ಮೇಲೂ ಬೀರಿತ್ತು. ಇದರ ಪರಿಣಾಮವಾಗಿ ಮೇ 31 ರಿಂದ ಜೂನ್​ 3ರ ನಡುವೆ ಕೇರಳಕ್ಕೆ ಮುಂಗಾರು ಮಳೆ ಪ್ರವೇಶ ಆಗುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ನಿರೀಕ್ಷಿಸಿತು. ಅದೇ ರೀತಿಯಾಗಿ ನಿನ್ನೆ ಕೇರಳಕ್ಕೆ ಮುಂಗಾರು ಮಳೆ ಕಾಲಿಟ್ಟಿದೆ.

 

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...