ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ಮಹಾನಗರದಲ್ಲಿ ಒಂದು ಲಕ್ಷ ಮನೆಗಳ ನಿರ್ಮಾಣ ಯೋಜನೆಯನ್ನು ಪ್ರಕಟಿಸಿದ್ದರು. ಯೋಜನೆಯನ್ನು ಕೇವಲ ಘೋಷಣೆ ಮಾಡಲಾಯಿತೇ ಹೊರತು ಒಂದೇ ಒಂದು ಮನೆಯನ್ನೂ ಸಹ ನಿರ್ಮಾಣ ಮಾಡಿಲ್ಲ. ಕಾರ್ಯಾದೇಶವನ್ನು ನೀಡಲಾಗಿದ್ದರೂ ಸಹ ಕಾಮಗಾರಿ ಆರಂಭಿಸಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಈ ಯೋಜನೆಯಡಿ ಕೊಳಗೇರಿ ಪ್ರದೇಶದ ವಸತಿ ರಹಿತರಿಗೆ ಒಂದು ಲಕ್ಷ ಮನೆಗಳನ್ನು ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ.ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದರು.