ಬೆಂಗಳೂರು:- ಮುಡಾ ಕೇಸ್ ಡೈವರ್ಟ್ ಮಾಡಲು ದರ್ಶನ್ ಫೋಟೋ ವೈರಲ್ ಮಾಡಲಾಗಿದೆ ಎಂಬ ಪ್ರಹ್ಲಾದ್ ಜೋಶಿ ಹೇಳಿಕೆ ವಿಚಾರವಾಗಿ DCM ಡಿಕೆ ಶಿವಕುಮಾರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ದರ್ಶನ್ ವಿಚಾರ ಹಾಗೂ ಮುಡಾ ಆರೋಪದ ವಿಚಾರ ಬಿಡಿ. ಈಗ ಮಹದಾಯಿ ವಿಚಾರದಲ್ಲಿ ಏನು ತೊಂದರೆಯಾಗಿದೆ. ಮಹದಾಯಿ ಯೋಜನೆಗೆ ಅನುಮತಿ ಕೊಡಿಸ್ರಪ್ಪ ಎಂದಿದ್ದಾರೆ.
ಮಹದಾಯಿ ಯೋಜನೆ ಜಾರಿ ಮಾಡಲು ದುಡ್ಡು ಕೊಡಿಸ್ರಪ್ಪ. ಗಣೇಶ ಚತುರ್ಥಿ ಹಬ್ಬದ ದಿನವೇ ವಿಘ್ನ ನಿವಾರಣೆ ಆಗಲಿ. ಇಲ್ಲಿಂದಲೇ ದೀರ್ಘದಂಡ ನಮಸ್ಕಾರ ಹಾಕುತ್ತೇನೆ ಎಂದು ವ್ಯಂಗ್ಯವಾಡಿದ್ದಾರೆ.
ಇನ್ನೂ ಮುಡಾ ಹಗರಣ ಮತ್ತು ವಾಲ್ಮೀಕಿ ಹಗರಣವನ್ನ ಮುಚ್ಚಿಹಾಕೋಕೆ ಕಾಂಗ್ರೆಸ್ ಅತಿದೊಡ್ಡ ಷಡ್ಯಂತ್ರವನ್ನೇ ಮಾಡಿದೆ. ಜೈಲಿನಲ್ಲಿ ದರ್ಶನ್ಗೆ ರಾಜ್ಯಾತಿಥ್ಯದ ಫೋಟೋ ಹೊರಬಿಟ್ಟಿದ್ದೇ ರಾಜ್ಯ ಸರ್ಕಾರ ಎಂಬ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ ಸದ್ಯ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನವನ್ನೇ ಸೃಷ್ಟಿಸಿದೆ. ಈ ಹೇಳಿಕೆಗೆ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ.