ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ, ಪತ್ನಿಗೆ ಹೈಕೋರ್ಟ್ ನೋಟಿಸ್

tnit editors
1 Min Read

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ, ಪತ್ನಿಗೆ ಹೈಕೋರ್ಟ್ ನೋಟಿಸ್

 

 

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮತ್ತೊಮ್ಮೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿಬಿಐ ತನಿಖೆಗೆ ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತೆ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಮೇಲ್ಮನವಿಯ ಕುರಿತು ಇಂದು ಹೈಕೋರ್ಟ್ ವಿಚಾರಣೆ ನಡೆಸಿದೆ.

ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ನೋಟಿಸ್ ಜಾರಿಗೊಳಿಸುವಂತೆ ಆದೇಶ ನೀಡಿದೆ. ವಿವಾದಿತ ಪ್ರಕರಣದಲ್ಲಿ ಮುಡಾ ಪ್ರಾಧಿಕಾರದಿಂದ 14 ನಿವೇಶನಗಳನ್ನು ಅಕ್ರಮವಾಗಿ ಪತ್ನಿಗೆ ಹಂಚಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಈ ಬಗ್ಗೆ ಸ್ನೇಹಮಯಿ ಲೋಕಾಯುಕ್ತಕ್ಕೆ ದೂರು ನೀಡಿದರೆ, ನಂತರ ಜಾರಿ ನಿರ್ದೇಶನಾಲಯ (ಇಡಿ) ಕೂಡ ಪ್ರಕರಣ ದಾಖಲಿಸಿಕೊಂಡಿತ್ತು. ಮುಂದಾಗಿ ಸಿಎಂ ಪತ್ನಿ ಪಾರ್ವತಿ, ತಮ್ಮ ಹೆಸರಿನಲ್ಲಿ ಇದ್ದ ಸೈಟ್ಗಳನ್ನು ಮುಡಾಕ್ಕೆ ಹಿಂದಿರುಗಿಸಿದ್ದರು.

ಈ ಸಂಬಂಧ ಇದೀಗ ಹೈಕೋರ್ಟ್ ನ್ಯಾಯಮೂರ್ತಿಗಳಾದ ವಿ. ಕಾಮೇಶ್ವರ ರಾವ್ ಹಾಗೂ ಸಿ.ಎಂ. ಜೋಶಿ ಅವರನ್ನೊಳಗೊಂಡ ವಿಭಾಗೀಯ ಪೀಠವು ನೋಟಿಸ್ ನೀಡಲು ಸೂಚನೆ ನೀಡಿದ್ದು, ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 4ಕ್ಕೆ ಮುಂದೂಡಿದೆ.

ಇಡೀ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಮುಡಾ ಹಗರಣದಲ್ಲಿ, ಹಣಕಾಸು ಅಕ್ರಮ ಹಾಗೂ ಪ್ರಭಾವ ಬಳಸಿ ಸೈಟ್ ಹಂಚಿಕೆ ನಡೆದಿರುವುದಾಗಿ ಆರೋಪ ಕೇಳಿಬರುತ್ತಿದೆ. ಈ ಸಂಬಂಧ ಇಡಿ ತನಿಖೆ ಪ್ರಗತಿಯಲ್ಲಿದೆ.

Share This Article