No menu items!
33.8 C
Munich
Saturday, August 15, 2026

ಮುಡಾ ಹಗರಣ: ಸಿದ್ದರಾಮಯ್ಯಗೆ ಇಂದು ನಿರ್ಣಾಯಕ ದಿನ

Must read

ಮುಡಾ ಹಗರಣ: ಸಿದ್ದರಾಮಯ್ಯಗೆ ಇಂದು ನಿರ್ಣಾಯಕ ದಿನ

ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಹೈಕೋರ್ಟ್ನಲ್ಲಿ ಸಲ್ಲಿಕೆಯಾಗಿರುವ ಅರ್ಜಿಯ ಸುದೀರ್ಘ ವಿಚಾರಣೆ ನಡೆದಿದೆ. ಇಂದು ಕೂಡ ವಿಚಾರಣೆ ಮುಂದುವರಿಯಲಿದ್ದು, ಬಹುತೇಕ ಆದೇಶ ಪ್ರಕಟವಾಗುವ ನಿರೀಕ್ಷೆಯೂ ಇದೆ. ಇದು, ಏನಾಗಲಿದೆ ಪ್ರಾಸಿಕ್ಯೂಷನ್ ಭವಿಷ್ಯ ಎಂಬ ಕುತೂಹಲ ಕೆರಳಿಸಿದೆ.
ಇಂದು ಸಿಎಂ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ವಾದ ಮಂಡಿಸಲಿದ್ದು, ರಾಜ್ಯಪಾಲರ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಲಿದ್ದಾರೆ. ಹೀಗಾಗಿ ಇಂದು ಹೈಕೋರ್ಟ್‌ನಲ್ಲಿ ಹೈವೋಲ್ಟೇಜ್ ವಾದ-ಪ್ರತಿವಾದ ನಡೆಯುವ ಸಾಧ್ಯತೆಯಿದೆ. ಇನ್ನು, ಸಿಎಂ ಪರ ಹಿರಿಯ ವಕೀಲ ರವಿವರ್ಮಕುಮಾರ್ ಕೂಡಾ ವಾದ ಮಂಡಿಸಲಿದ್ದಾರೆ.. ಕೆಸರೆ ಗ್ರಾಮದ ಬಗ್ಗೆ ದೂರುದಾರರು ಎತ್ತಿರುವ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ. ಎಲ್ಲಾ ವಾದ ಆಲಿಸಲಿರುವ ಕೋರ್ಟ್, ಇಂದೇ ಪ್ರಾಸಿಕ್ಯೂಷನ್ ಭವಿಷ್ಯ ನಿರ್ಧರಿಸುವ ಸಾಧ್ಯತೆಯಿದೆ.. ಹೀಗಾಗಿ, ಸಿಎಂ ಸಿದ್ದರಾಮಯ್ಯಗೆ ಆತಂಕ ಶುರುವಾಗಿದೆ.

- Advertisement -spot_img

More articles

- Advertisement -spot_img

Latest article