ಮುನಿಸು ಬದಿಗಿಟ್ಟು ಸುಭದ್ರ ಸರಕಾರ ನೀಡೋಣ: ಸಚಿವರಲ್ಲಿ ಸಿಎಂ ಸಿದ್ದರಾಮಯ್ಯ ಮನವಿ

Date:

ಬೆಂಗಳೂರು;- ಮುನಿಸು ಬದಿಗಿಟ್ಟು ಸುಭದ್ರ ಸರಕಾರ ನೀಡೋಣ ಎಂದು ಸಚಿವರಲ್ಲಿ ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಸದ್ಯವೇ ಲೋಕಸಭಾ ಚುನಾವಣೆ ಇರುವ ಕಾರಣ ನಾವು ಭಿನ್ನಮತ ಪ್ರದರ್ಶಿಸುವುದು ಸರಿಯಲ್ಲ. ಹೀಗಾಗಿ ಎಲ್ಲ ಮುನಿಸುಗಳನ್ನು ಬದಿಗಿಟ್ಟು, ಸುಭದ್ರ ಸರಕಾರ ನೀಡೋಣ ಹಾಗೂ ಲೋಕಸಭಾ ಚುನಾವಣೆಯತ್ತ ದೃಷ್ಟಿ ಹರಿಸೋಣ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಸಂಪುಟದ ಸಚಿವರಿಗೆ ಮನವಿ ಮಾಡಿದ್ದಾರೆ.
ಅನಗತ್ಯ ಹೇಳಿಕೆ ನೀಡಿ ವಿವಾದ ಸೃಷ್ಟಿಸದಂತೆ ಎಲ್ಲರನ್ನೂ ಕೋರಿಕೊಂಡಿದ್ದಾರೆ. ಉಪಾಹಾರ ಕೂಟದಲ್ಲಿ ಡಿಸಿಎಂ ಶಿವಕುಮಾರ್, ಡಾ| ಜಿ. ಪರಮೇಶ್ವರ, ಎಂ.ಬಿ. ಪಾಟೀಲ್, ರಾಮಲಿಂಗಾ ರೆಡ್ಡಿ, ಈಶ್ವರ ಖಂಡ್ರೆ, ಕೆ.ಎನ್. ರಾಜಣ್ಣ ಸೇರಿ 15 ಸಚಿವರು ಭಾಗವಹಿಸಿದ್ದರು. ಉಳಿದ ಸಚಿವರಿಗೆ ಮುಂದಿನ ದಿನಗಳಲ್ಲಿ ಉಪಾಹಾರ ಕೂಟ ಏರ್ಪಡಿಸಲು ಸಿಎಂ ನಿರ್ಧರಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಿ ಜನರಿಗೆ ನ್ಯಾಯ ಕೊಡಸಿದರೆ ಬಿಜೆಪಿಗೆ ಜನಾಶೀರ್ವಾದ: ಬೊಮ್ಮಾಯಿ

ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಿ ಜನರಿಗೆ ನ್ಯಾಯ ಕೊಡಸಿದರೆ ಬಿಜೆಪಿಗೆ...

ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ

ಕರಾವಳಿ–ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ: ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹವಾಮಾನದಲ್ಲಿ ಮತ್ತೊಮ್ಮೆ...

ಪಿರಿಯಡ್ಸ್ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಇಲ್ಲಿದೆ ಉತ್ತರ

ಪಿರಿಯಡ್ಸ್ ಸಮಯದಲ್ಲಿ ಯಾವ ರೀತಿಯ ಆಹಾರಗಳ ಸೇವನೆ ಮಾಡಬೇಕು? ಇಲ್ಲಿದೆ ಉತ್ತರ ಮಹಿಳೆಯರ...

ನನಗೆ ಈಗಲೇ ಅಧಿಕಾರ ಬೇಕು ಅಂತ ಇಲ್ಲ, ಪಕ್ಷಕ್ಕಾಗಿ ದುಡಿಯುತ್ತೇನೆ: ನಿಖಿಲ್ ಕುಮಾರಸ್ವಾಮಿ

ನನಗೆ ಈಗಲೇ ಅಧಿಕಾರ ಬೇಕು ಅಂತ ಇಲ್ಲ, ಪಕ್ಷಕ್ಕಾಗಿ ದುಡಿಯುತ್ತೇನೆ: ನಿಖಿಲ್...