ಮುಳುಗಡೆಯಾದ ಹಂಪಿಯ ಸ್ಮಾರಕಗಳು

Date:

ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಅಧಿಕ ಮಳೆಯಾದ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ತುಂಗಭದ್ರಾ ಜಲಾಶಯ ತುಂಬಿರುವ ಪರಿಣಾಮ 60 ಸಾವಿರ ಕ್ಯೂಸೆಕ್ ನೀರನ್ನು ಹೊರಕ್ಕೆ ಬಿಡಲಾಗಿದೆ ಎಂದು ಜಲಾಶಯ ಬೋರ್ಡ್ ಸ್ಪಷ್ಟನೆ ನೀಡಿದೆ.

 

ವಿಜಯನಗರ ಜಿಲ್ಲೆಯ ಹೊಸಪೇಟೆ ಬಳಿ ಇರುವ ತುಂಗಭದ್ರಾ ಜಲಾಶಯದಿಂದ ನೀರು ಬಿಡುಗಡೆ ಕುರಿತು ಮಂಗಳವಾರವೇ ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ಕಡಪ, ಅನಂತಪುರ ಹಾಗೂ ಮೆಹಬೂಬ್ ನಗರ ಜಿಲ್ಲಾಡಳಿತಗಳಿಗೆ ತುಂಗಭದ್ರಾ ಜಲಾಶಯ ಬೋರ್ಡ್ ಮಾಹಿತಿ ರವಾನಿಸಿತ್ತು.

 

ಈಗಾಗಲೇ 60 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಿರುವುದರಿಂದ ವಿಶ್ವವಿಖ್ಯಾತ ಹಂಪಿಯ ಹಲವು ಸ್ಮಾರಕಗಳು, ಮಂಟಪಗಳು ಮುಳುಗಡೆಯಾಗಿವೆ. ಪ್ರಮುಖವಾಗಿ ಪುರಂದರದಾಸರ ಮಂಟಪ, ಧಾರ್ಮಿಕ ವಿಧಿವಿಧಾನ ಮಂಟಪ ಮುಳುಗಡೆಯಾಗಿವೆ. ಇನ್ನು ಈಗಾಗಲೇ ಸ್ಥಳೀಯ ಆಡಳಿತಗಳ ನೆರವಿನಿಂದ ಆಯಾ ಜಿಲ್ಲಾಡಳಿತಗಳೂ ಸಹ ಜನರಿಗೆ ನದಿಪಾತ್ರದ ಕಡೆ ಸುಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಆದರೆ ಜನರಲ್ಲಿ ಮತ್ತೆ ಪ್ರವಾಹದ ಭೀತಿ ಕಾಡುತ್ತಿದೆ.

 

 

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...