ಮುಳುಗಡೆಯಾದ ಹಂಪಿಯ ಸ್ಮಾರಕಗಳು

Date:

ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಅಧಿಕ ಮಳೆಯಾದ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ತುಂಗಭದ್ರಾ ಜಲಾಶಯ ತುಂಬಿರುವ ಪರಿಣಾಮ 60 ಸಾವಿರ ಕ್ಯೂಸೆಕ್ ನೀರನ್ನು ಹೊರಕ್ಕೆ ಬಿಡಲಾಗಿದೆ ಎಂದು ಜಲಾಶಯ ಬೋರ್ಡ್ ಸ್ಪಷ್ಟನೆ ನೀಡಿದೆ.

 

ವಿಜಯನಗರ ಜಿಲ್ಲೆಯ ಹೊಸಪೇಟೆ ಬಳಿ ಇರುವ ತುಂಗಭದ್ರಾ ಜಲಾಶಯದಿಂದ ನೀರು ಬಿಡುಗಡೆ ಕುರಿತು ಮಂಗಳವಾರವೇ ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ಕಡಪ, ಅನಂತಪುರ ಹಾಗೂ ಮೆಹಬೂಬ್ ನಗರ ಜಿಲ್ಲಾಡಳಿತಗಳಿಗೆ ತುಂಗಭದ್ರಾ ಜಲಾಶಯ ಬೋರ್ಡ್ ಮಾಹಿತಿ ರವಾನಿಸಿತ್ತು.

 

ಈಗಾಗಲೇ 60 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಿರುವುದರಿಂದ ವಿಶ್ವವಿಖ್ಯಾತ ಹಂಪಿಯ ಹಲವು ಸ್ಮಾರಕಗಳು, ಮಂಟಪಗಳು ಮುಳುಗಡೆಯಾಗಿವೆ. ಪ್ರಮುಖವಾಗಿ ಪುರಂದರದಾಸರ ಮಂಟಪ, ಧಾರ್ಮಿಕ ವಿಧಿವಿಧಾನ ಮಂಟಪ ಮುಳುಗಡೆಯಾಗಿವೆ. ಇನ್ನು ಈಗಾಗಲೇ ಸ್ಥಳೀಯ ಆಡಳಿತಗಳ ನೆರವಿನಿಂದ ಆಯಾ ಜಿಲ್ಲಾಡಳಿತಗಳೂ ಸಹ ಜನರಿಗೆ ನದಿಪಾತ್ರದ ಕಡೆ ಸುಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಆದರೆ ಜನರಲ್ಲಿ ಮತ್ತೆ ಪ್ರವಾಹದ ಭೀತಿ ಕಾಡುತ್ತಿದೆ.

 

 

Share post:

Subscribe

spot_imgspot_img

Popular

More like this
Related

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...