ಮೂಗಿಗೆ ನಿಂಬೆ ರಸ ಹಾಕಿಸಿಕೊಂಡಿದ್ದಕ್ಕೆ ಶಿಕ್ಷಕ ಸಾವು?

Date:

ರಾಯಚೂರು: ಸಾಮಾಜಿಕ ಜಾಲತಾಣದಲ್ಲಿ ಕಳೆದ ಕೆಲ ದಿನಗಳ ಹಿಂದೆ ವೈರಲ್ ಆಗಿದ್ದ ಲಿಂಬೆ ಹಣ್ಣಿನ ಹನಿ ಕುರಿತಾದ ಸುದ್ದಿ ಕೇಳಿ ಜಿಲ್ಲೆಯ ಶಿಕ್ಷಕರೊಬ್ಬರು ಮೂಗಿನೊಳಗೆ ನಿಂಬೆಹಣ್ಣಿನ ಹನಿ ಬಿಟ್ಟುಕೊಂಡು ಇದೀಗ ಸಾವನ್ನಪ್ಪಿದ್ದಾರೆ.

ರಾಯಚೂರು ಜಿಲ್ಲೆ ಸಿಂಧನೂರು ನಗರದ ಶರಣಬಸವೇಶ್ವರ ಕಾಲೋನಿಯ ಶಾಲಾ ಶಿಕ್ಷಕ ಬಸವರಾಜ್ ಮೃತ ದುರ್ದೈವಿ. ಮೂಗಿನಲ್ಲಿ ನಿಂಬೆಹಣ್ಣಿನ ಹನಿ ಬಿಟ್ಟುಕೊಂಡರೆ ಕೊರೊನಾ ಬರುವುದಿಲ್ಲ ಎಂದುಕೊಂಡು ಬಸವರಾಜ್ ಅವರು ಬೆಳಗ್ಗೆ ಮೂಗಿಗೆ ನಿಂಬೆಹಣ್ಣಿನ ಹನಿ ಬಿಟ್ಟು ಕೊಂಡಿದ್ದರು. ನಂತರ ಕೆಲಸಮಯಗಳ ಬಳಿಕ ಬಸವರಾಜ್ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದೆ ಕೂಡಲೇ ಸಂಬಂಧಿಕರು ಅಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ. ಆದರೆ ಆಸ್ಪತ್ರೆ ಮಾರ್ಗ ಮಧ್ಯದಲ್ಲೇ ಬಸವರಾಜ್ ಕೊನೆಯುಸಿರೆಳೆದಿದ್ದಾರೆ.

ಆರೋಗ್ಯದಿಂದಿದ್ದ ಬಸವರಾಜ್ ಅವರು ನಿಂಬೆಹಣ್ಣಿನ ರಸ ಮೂಗಿಗೆ ಬಿಟ್ಟು ಕೊಂಡ ಬಳಿಕ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದರಿಂದಾಗಿ ನಿಂಬೆ ಹಣ್ಣಿನ ರಸದಿಂದಾಗಿ ಸಾವನ್ನಪ್ಪಿರಬಹುದೆಂದು ಸಂಬಂಧಿಕರು ಅನುಮಾನ ವ್ಯಕ್ತಪಡಿಸಿದ್ದಾರೆ.

ಆರೋಗ್ಯದಿಂದಿದ್ದ ಬಸವರಾಜ್ ಅವರು ನಿಂಬೆಹಣ್ಣಿನ ರಸ ಮೂಗಿಗೆ ಬಿಟ್ಟು ಕೊಂಡ ಬಳಿಕ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದರಿಂದಾಗಿ ನಿಂಬೆ ಹಣ್ಣಿನ ರಸದಿಂದಾಗಿ ಸಾವನ್ನಪ್ಪಿರಬಹುದೆಂದು ಸಂಬಂಧಿಕರು ಅನುಮಾನ ವ್ಯಕ್ತಪಡಿಸಿದ್ದಾರೆ.

 

Share post:

Subscribe

spot_imgspot_img

Popular

More like this
Related

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...