ಮೂಗಿಗೆ ನಿಂಬೆ ರಸ ಹಾಕಿಸಿಕೊಂಡಿದ್ದಕ್ಕೆ ಶಿಕ್ಷಕ ಸಾವು?

Date:

ರಾಯಚೂರು: ಸಾಮಾಜಿಕ ಜಾಲತಾಣದಲ್ಲಿ ಕಳೆದ ಕೆಲ ದಿನಗಳ ಹಿಂದೆ ವೈರಲ್ ಆಗಿದ್ದ ಲಿಂಬೆ ಹಣ್ಣಿನ ಹನಿ ಕುರಿತಾದ ಸುದ್ದಿ ಕೇಳಿ ಜಿಲ್ಲೆಯ ಶಿಕ್ಷಕರೊಬ್ಬರು ಮೂಗಿನೊಳಗೆ ನಿಂಬೆಹಣ್ಣಿನ ಹನಿ ಬಿಟ್ಟುಕೊಂಡು ಇದೀಗ ಸಾವನ್ನಪ್ಪಿದ್ದಾರೆ.

ರಾಯಚೂರು ಜಿಲ್ಲೆ ಸಿಂಧನೂರು ನಗರದ ಶರಣಬಸವೇಶ್ವರ ಕಾಲೋನಿಯ ಶಾಲಾ ಶಿಕ್ಷಕ ಬಸವರಾಜ್ ಮೃತ ದುರ್ದೈವಿ. ಮೂಗಿನಲ್ಲಿ ನಿಂಬೆಹಣ್ಣಿನ ಹನಿ ಬಿಟ್ಟುಕೊಂಡರೆ ಕೊರೊನಾ ಬರುವುದಿಲ್ಲ ಎಂದುಕೊಂಡು ಬಸವರಾಜ್ ಅವರು ಬೆಳಗ್ಗೆ ಮೂಗಿಗೆ ನಿಂಬೆಹಣ್ಣಿನ ಹನಿ ಬಿಟ್ಟು ಕೊಂಡಿದ್ದರು. ನಂತರ ಕೆಲಸಮಯಗಳ ಬಳಿಕ ಬಸವರಾಜ್ ಅವರ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದೆ ಕೂಡಲೇ ಸಂಬಂಧಿಕರು ಅಸ್ಪತ್ರೆಗೆ ಸಾಗಿಸಲು ಮುಂದಾಗಿದ್ದಾರೆ. ಆದರೆ ಆಸ್ಪತ್ರೆ ಮಾರ್ಗ ಮಧ್ಯದಲ್ಲೇ ಬಸವರಾಜ್ ಕೊನೆಯುಸಿರೆಳೆದಿದ್ದಾರೆ.

ಆರೋಗ್ಯದಿಂದಿದ್ದ ಬಸವರಾಜ್ ಅವರು ನಿಂಬೆಹಣ್ಣಿನ ರಸ ಮೂಗಿಗೆ ಬಿಟ್ಟು ಕೊಂಡ ಬಳಿಕ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದರಿಂದಾಗಿ ನಿಂಬೆ ಹಣ್ಣಿನ ರಸದಿಂದಾಗಿ ಸಾವನ್ನಪ್ಪಿರಬಹುದೆಂದು ಸಂಬಂಧಿಕರು ಅನುಮಾನ ವ್ಯಕ್ತಪಡಿಸಿದ್ದಾರೆ.

ಆರೋಗ್ಯದಿಂದಿದ್ದ ಬಸವರಾಜ್ ಅವರು ನಿಂಬೆಹಣ್ಣಿನ ರಸ ಮೂಗಿಗೆ ಬಿಟ್ಟು ಕೊಂಡ ಬಳಿಕ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದರಿಂದಾಗಿ ನಿಂಬೆ ಹಣ್ಣಿನ ರಸದಿಂದಾಗಿ ಸಾವನ್ನಪ್ಪಿರಬಹುದೆಂದು ಸಂಬಂಧಿಕರು ಅನುಮಾನ ವ್ಯಕ್ತಪಡಿಸಿದ್ದಾರೆ.

 

Share post:

Subscribe

spot_imgspot_img

Popular

More like this
Related

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ

ಸೆಪ್ಟೆಂಬರ್ 22ರಿಂದ ಅಕ್ಟೋಬರ್ 7ರವರೆಗೆ ಜಾತಿ ಜನಗಣತಿ: ಸಿಎಂ ಸಿದ್ದರಾಮಯ್ಯ ಬೆಂಗಳೂರು:- ರಾಜ್ಯದಲ್ಲಿ...

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ

ಮೀನು ಹಿಡಿಯುತ್ತಿದ್ದ ಬಾಲಕರನ್ನು ಮಾತನಾಡಿಸಿದ ಟಿಬಿ ಜಯಚಂದ್ರ ಶಿರಾ ಶಾಸಕರಾದ ಹಾಗೂ ದೆಹಲಿಯ...

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ!

Movie ticket price: ಇಂದಿನಿಂದ ಚಿತ್ರಮಂದಿರಗಳಲ್ಲಿ ಏಕರೂಪ ಟಿಕೆಟ್ ದರ ಜಾರಿ! ಬೆಂಗಳೂರು:...