ಮೂರನೇ ಟಿ20ಯಿಂದ ಸೈನಿ ಹೊರಗುಳಿಯುವ ಸಾಧ್ಯತೆ

Date:

ಭಾರತದ ವೇಗಿ ನವದೀಪ್ ಸೈನಿ ಭಾರತ ಮತ್ತು ಶ್ರೀಲಂಕಾ ನಡುವಿನ ತೃತೀಯ ಮತ್ತು ಕೊನೇಯ ಟಿ20ಐ ಪಂದ್ಯದಿಂದ ಹೊರ ಬೀಳುವ ಸಾಧ್ಯತೆಯಿದೆ. ದ್ವಿತೀಯ ಪಂದ್ಯದ ವೇಳೆ ಸೈನಿ ಭುಜಕ್ಕೆ ಗಾಯವಾಗಿತ್ತು. ಹೀಗಾಗಿ ಅವರು ಕೊನೇ ಪಂದ್ಯದಿಂದ ಹೊರ ಬೀಳುವ ನಿರೀಕ್ಷೆಯಿದೆ. ಕೊಲಂಬೋದ ಆರ್‌ ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ದ್ವಿತೀಯ ಟಿ20ಐ ಪಂದ್ಯದ ವೇಳೆ ಶ್ರೀಲಂಕಾದ ಇನ್ನಿಂಗ್ಸ್‌ನಲ್ಲಿ ಸೈನಿ ಅವರು ಚಮಿಕ ಕರುಣರತ್ನೆ ಕ್ಯಾಚ್ ಪಡೆಯಲೆತ್ನಿಸಿ ಭುಜಕ್ಕೆ ಗಾಯ ಮಾಡಿಕೊಂಡಿದ್ದರು.

ಬಲಗೈ ವೇಗಿ ಸೈನಿ ಎಕ್ಸ್ಟ್ರಾ ಕವರ್‌ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದಾಗ ಗಾಯವಾಗಿತ್ತು.
ಚಮಿಕ ಹೊಡೆದ ಚೆಂಡು ಸೈನಿಯ ಮೇಲಿಂದ ಹಾದು ಹೋಗುವಾಗ ಸೈನಿ ಕ್ಯಾಚ್ ಪಡೆಯಲು ಯತ್ನಿಸಿ ಕೆಳಕ್ಕೆ ಬಿದ್ದರು. ಆಗ ಸೈನಿ ಭುಜಕ್ಕೆ ಗಾಯವಾಗಿದ್ದು ಅವರ ಮುಖಭಾವದಲ್ಲೇ ಗೊತ್ತಾಗಿತ್ತು. ಹೀಗಾಗಿ ಜುಲೈ 29ರಂದು ನಡೆಯಲಿರುವ ತೃತೀಯ ಟಿ20ಐ ಪಂದ್ಯದಲ್ಲಿ ಸೈನಿ ಆಡುವ ಸಾಧ್ಯತೆಯಿಲ್ಲ.

ಭಾರತೀಯ ತಂಡದಲ್ಲಿ ಕೃನಾಲ್ ಪಾಂಡ್ಯಗೆ ಕೋವಿಡ್ ಸೋಂಕು ತಗುಲಿದ್ದರಿಂದ ಮುನ್ನೆಚ್ಚರಿಕೆಯಾಗಿ ಭಾರತ ತಂಡದಲ್ಲಿ ಪೃಥ್ವಿ ಶಾ, ಸೂರ್ಯಕುಮಾರ್ ಯಾದವ್, ದೀಪಕ್ ಚಾಹರ್, ಹಾರ್ದಿಕ್ ಪಾಂಡ್ಯ, ಇಶಾನ್ ಕಿಶನ್ ಮೊದಲಾದವರು ಐಸೊಲೇಶನ್‌ನಲ್ಲಿದ್ದರು. ಹೀಗಾಗಿ ದ್ವಿತೀಯ ಪಂದ್ಯದಲ್ಲಿ ಸೈನಿ ಕಣಕ್ಕಿಳಿದಿದ್ದರು. ಆದರೆ ಪಂದ್ಯದಲ್ಲಿ ಭಾರತ 4 ವಿಕೆಟ್ ಸೋಲನುಭವಿಸಿತ್ತು.

Share post:

Subscribe

spot_imgspot_img

Popular

More like this
Related

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ: ಹೆಚ್.ಡಿ.ಕುಮಾರಸ್ವಾಮಿ ಟಾಂಗ್

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ:...

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ ಬೆಳಗಾವಿ:...

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ ಬೆಂಗಳೂರು:...

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ ಬೆಂಗಳೂರು:...