ಮೂರನೇ ಟಿ20ಯಿಂದ ಸೈನಿ ಹೊರಗುಳಿಯುವ ಸಾಧ್ಯತೆ

Date:

ಭಾರತದ ವೇಗಿ ನವದೀಪ್ ಸೈನಿ ಭಾರತ ಮತ್ತು ಶ್ರೀಲಂಕಾ ನಡುವಿನ ತೃತೀಯ ಮತ್ತು ಕೊನೇಯ ಟಿ20ಐ ಪಂದ್ಯದಿಂದ ಹೊರ ಬೀಳುವ ಸಾಧ್ಯತೆಯಿದೆ. ದ್ವಿತೀಯ ಪಂದ್ಯದ ವೇಳೆ ಸೈನಿ ಭುಜಕ್ಕೆ ಗಾಯವಾಗಿತ್ತು. ಹೀಗಾಗಿ ಅವರು ಕೊನೇ ಪಂದ್ಯದಿಂದ ಹೊರ ಬೀಳುವ ನಿರೀಕ್ಷೆಯಿದೆ. ಕೊಲಂಬೋದ ಆರ್‌ ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆದ ದ್ವಿತೀಯ ಟಿ20ಐ ಪಂದ್ಯದ ವೇಳೆ ಶ್ರೀಲಂಕಾದ ಇನ್ನಿಂಗ್ಸ್‌ನಲ್ಲಿ ಸೈನಿ ಅವರು ಚಮಿಕ ಕರುಣರತ್ನೆ ಕ್ಯಾಚ್ ಪಡೆಯಲೆತ್ನಿಸಿ ಭುಜಕ್ಕೆ ಗಾಯ ಮಾಡಿಕೊಂಡಿದ್ದರು.

ಬಲಗೈ ವೇಗಿ ಸೈನಿ ಎಕ್ಸ್ಟ್ರಾ ಕವರ್‌ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದಾಗ ಗಾಯವಾಗಿತ್ತು.
ಚಮಿಕ ಹೊಡೆದ ಚೆಂಡು ಸೈನಿಯ ಮೇಲಿಂದ ಹಾದು ಹೋಗುವಾಗ ಸೈನಿ ಕ್ಯಾಚ್ ಪಡೆಯಲು ಯತ್ನಿಸಿ ಕೆಳಕ್ಕೆ ಬಿದ್ದರು. ಆಗ ಸೈನಿ ಭುಜಕ್ಕೆ ಗಾಯವಾಗಿದ್ದು ಅವರ ಮುಖಭಾವದಲ್ಲೇ ಗೊತ್ತಾಗಿತ್ತು. ಹೀಗಾಗಿ ಜುಲೈ 29ರಂದು ನಡೆಯಲಿರುವ ತೃತೀಯ ಟಿ20ಐ ಪಂದ್ಯದಲ್ಲಿ ಸೈನಿ ಆಡುವ ಸಾಧ್ಯತೆಯಿಲ್ಲ.

ಭಾರತೀಯ ತಂಡದಲ್ಲಿ ಕೃನಾಲ್ ಪಾಂಡ್ಯಗೆ ಕೋವಿಡ್ ಸೋಂಕು ತಗುಲಿದ್ದರಿಂದ ಮುನ್ನೆಚ್ಚರಿಕೆಯಾಗಿ ಭಾರತ ತಂಡದಲ್ಲಿ ಪೃಥ್ವಿ ಶಾ, ಸೂರ್ಯಕುಮಾರ್ ಯಾದವ್, ದೀಪಕ್ ಚಾಹರ್, ಹಾರ್ದಿಕ್ ಪಾಂಡ್ಯ, ಇಶಾನ್ ಕಿಶನ್ ಮೊದಲಾದವರು ಐಸೊಲೇಶನ್‌ನಲ್ಲಿದ್ದರು. ಹೀಗಾಗಿ ದ್ವಿತೀಯ ಪಂದ್ಯದಲ್ಲಿ ಸೈನಿ ಕಣಕ್ಕಿಳಿದಿದ್ದರು. ಆದರೆ ಪಂದ್ಯದಲ್ಲಿ ಭಾರತ 4 ವಿಕೆಟ್ ಸೋಲನುಭವಿಸಿತ್ತು.

Share post:

Subscribe

spot_imgspot_img

Popular

More like this
Related

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...