ಮೈಕ್ರೊಫೈನಾನ್ಸ್ ಟಾರ್ಚರ್: ಕೇವಲ 10 ಸಾವಿರ ರೂಪಾಯಿಗೆ ಮನೆಗೆ ಬೀಗ
ಗದಗ: ಕರ್ನಾಟಕದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜನರು ಮನೆ, ಊರು ಖಾಲಿ ಮಾಡುತ್ತಿದ್ದಾರೆ. ಕೆಲವರು ಆತ್ಮಹತ್ಯೆಗೆ ಯತ್ನಿಸಿದರೆ, ಮತ್ತೆ ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೀಗ ಸಹೋರದನ ಚಿಕಿತ್ಸೆಗಾಗಿ ವೃದ್ಧೆಯೊಬ್ಬರು 10 ಸಾವಿರ ಸಾಲ ಪಡೆದಿದ್ದು, ಅದನ್ನು ಮರುಪಾವತಿಸದಕ್ಕೆ ಆಕೆಯನ್ನು ಮನೆಯಿಂದ ಆಚೆ ಹಾಕಿರುವ ಘಟನೆ ಗದಗ ಜಿಲ್ಲೆಯ ರೋಣ ಪಟ್ಟಣದಲ್ಲಿ ನಡೆದಿದೆ.
ವೃದ್ಧೆ ಉಷಾದೇವಿ ಎನ್ನುವರು ಸಹೋದರನ ಚಿಕಿತ್ಸೆಗೆಂದು ಮೌಲಾಸಾಬ್ ಬಳಿ ಬಡ್ಡಿಗೆಂದು 10 ಸಾವಿರ ರೂಪಾಯಿ ಸಾಲ ಪಡೆದುಕೊಂಡಿದ್ದಳು. ಈಗ ಬಡ್ಡಿ ದಂಧೆಕೋರ ಮೌಲಾಸಾಬ್ 10 ಸಾವಿರ ರೂಪಾಯಿ ಸಾಲಕ್ಕೆ ವೃದ್ಧೆ ಉಷಾದೇವಿ ಮನೆಗೆ ಬೀಗ ಹಾಕಿದ್ದಾನೆ. ಸ್ವಲ್ಪ ದಿನ ಕಾಲಾವಕಾಶ ಕೇಳಿದರೂ ಸಹ ಕೇಳದ ಮೌಲಾಸಾಬ್, ವೃದ್ಧೆ ಉಷಾದೇವಿಯನ್ನು ಹೊರಗೆ ಹಾಕಿ ಮನೆಗೆ ಬೀಗ ಹಾಕಿದ್ದಾನೆ. ಗದಗ ಜಿಲ್ಲೆಯ ರೋಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.