No menu items!
17 C
Munich
Saturday, May 2, 2026

ಮೈತ್ರಿ ಸರ್ಕಾರ ಪತನಗೊಂಡಿದ್ದು ಅಪ್ಪ ಮಕ್ಕಳಿಂದಲೇ ! ಸಿದ್ದರಾಮಯ್ಯ ಈ ಹೇಳಿಕೆ ನೀಡಿದ್ದೇಕೆ ಗೊತ್ತಾ ?

Must read

ಬಿಜೆಪಿ ಅಧಿಕಾರಕ್ಕೆ ಬರಬಾರದು ಎಂಬ ಕಾರಣಕ್ಕೆ   ಹೈಕಮಾಂಡ್ ನಿರ್ಧಾರದಂತೆ ನಾವು 80 ಶಾಸಕರಿದ್ದರೂ ಸಹ 37 ಶಾಸಕರಿರುವ ಜೆಡಿಎಸ್ ಗೆ ಬೆಂಬಲ ಕೊಡೋಣ ಎಂದು ಹೇಳಿದಾಗ ಮರು ಮಾತನಾಡದೇ ಒಪ್ಪಿಕೊಂಡಿದ್ದೆವು ಆದರೆ ಅದರ ಎಲ್ಲ ಶಾಸಕರು, ಮಂತ್ರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಇರುವುದು ಮೈತ್ರಿ ಸರ್ಕಾರದ ಪತನಕ್ಕೆ ಕಾರಣ ಎಂದರು. ಇದಕ್ಕೆಲ್ಲ ಕಾರಣ ಜೆಡಿಎಸ್ ನ ದೇವೇಗೌಡರು ಕುಮಾರಸ್ವಾಮಿ ಹಾಗೂ ರೇವಣ್ಣ ಎಂದು ನೇರ ಆರೋಪ ಮಾಡಿದ್ದಾರೆ .

ನಾನು ಯಾವತ್ತೂ ರಾಜಕೀಯವನ್ನು ದುರುಪಯೋಗಪಡಿಸಿಕೊಂಡಿಲ್ಲ ದೇವೇಗೌಡರು ಅವರ ಪಕ್ಷ ಹಾಗೂ ಸರಕಾರವನ್ನು ಉಳಿಸಿಕೊಳ್ಳುವಲ್ಲಿ ನಿಪುಣರು ನಾವು ಐದಾರು ಸಮನ್ವಯ ಸಮಿತಿ ಸಭೆಗಳನ್ನು ಮಾಡಿದ್ದೇವು. ಆದರೆ ಅದರಲ್ಲಿ ಕೈಗೊಂಡ ನಿರ್ಧಾರಗಳನ್ನು ಕುಮಾರಸ್ವಾಮಿ ಜಾರಿಗೊಳಿಸಿಲ್ಲ. ಸಮನ್ವಯ ಸಮಿತಿ ನಿರ್ಧಾರ ಜಾರಿಗೊಳಿಸದೇ ಇದ್ದದ್ದು ಅವರ ತಪ್ಪು . ಇದೆಲ್ಲದರಿಂದ ಮೈತ್ರಿ ಸರ್ಕಾರ ಪತನಗೊಂಡಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ .

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article