ಮೈಸೂರಿನಲ್ಲಿ ಪುನೀತ್ ಯುವರತ್ನ ಚಿತ್ರೀಕರಣದ ವೇಳೆ ದರ್ಶನ್ ಫ್ಯಾನ್ಸ್ ಗೆ ಬಿತ್ತಾ ಏಟು?! ನಡೆದಿದ್ದೇನು ಈ ಸುದ್ದಿ ಓದಿ.

Date:

ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾದ ಪುನೀತ್ ರಾಜ್ಕುಮಾರ್ ಅಭಿನಯದ ಯುವ ರತ್ನ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಇನ್ನು ಈ ಚಿತ್ರದ ಚಿತ್ರೀಕರಣವನ್ನು ಮೈಸೂರಿನಲ್ಲಿ ನಡೆಸಲಾಗುತ್ತಿದ್ದು ಅಲ್ಲಿನ ಯುವರಾಜ ಕಾಲೇಜಿನಲ್ಲಿ ನಿನ್ನೆ ಚಿತ್ರೀಕರಣ ನಡೆಯುತ್ತಿತ್ತು. ಇನ್ನು ಇದೇ ವೇಳೆ ಪುನೀತ್ ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನು ನೋಡಲು ಜೈಕಾರ ಕೂಗುತ್ತಾ ಕಾಯುತ್ತಿದ್ದರು. ಈ ಸಮಯದಲ್ಲಿ ಕೆಲ ದರ್ಶನ್ ಅಭಿಮಾನಿಗಳು “ಜೈ ಡಿ ಬಾಸ್” ಎಂದು ಘೋಷಣೆಯನ್ನು ಗುಂಪಿನ ಮಧ್ಯೆ ಕೂಗಿದ್ದಾರೆ.


ಈ ವಿಷಯಕ್ಕಾಗಿಯೇ ದರ್ಶನ್ ಅಭಿಮಾನಿಗಳ ಗುಂಪು ಮತ್ತು ಪುನೀತ್ ಅಭಿಮಾನಿಗಳ ನಡುವೆ ಮಾತಿನ ಚಕಮಕಿ ನಡೆದಿದೆ ಹಾಗೂ ಆ ಗುಂಪಿನ ಯುವಕರು ಮಾಡುತ್ತಿರುವ ಆರೋಪದ ಪ್ರಕಾರ ಪುನೀತ್ ರಾಜ್ಕುಮಾರ್ ಅವರ ಬೌನ್ಸರ್ ಗಳು ಅವರ ಮೇಲೆ ಕೈ ಮಾಡಿದ್ದಾರಂತೆ. ಹೌದು ಇದೀಗ ಈ ವಿಷಯ ದೊಡ್ಡ ಮಟ್ಟಕ್ಕೆ ತಿರುಗಿದ್ದು ವಿದ್ಯಾರ್ಥಿಗಳ ಗುಂಪು ನ್ಯಾಯ ಬೇಕು ಎಂದು ಧರಣಿಯನ್ನು ಸಹ ನಡೆಸಿದೆ. ಇನ್ನು ಕೆಲ ಜನ ಈ ರೀತಿ ಮಾಡಿದ್ದು ತಪ್ಪು ಎಂದು ಹೇಳಿದರೆ, ಮತ್ತಷ್ಟು ಜನ ಇನ್ನೊಬ್ಬ ಸ್ಟಾರ್ ನಟನ ಚಿತ್ರ ಚಿತ್ರೀಕರಣ ನಡೆಯುತ್ತಿರುವ ಸ್ಥಳಕ್ಕೆ ಹೋಗಿ ಮತ್ತೊಬ್ಬ ಸ್ಟಾರ್ ನಟನಿಗೆ ಜೈಕಾರ ಹಾಕಿದ್ದು ತಪ್ಪು ಇದರಿಂದಲೇ ಇಷ್ಟೆಲ್ಲ ಆಗಿದ್ದು ಎಂದು ಅಭಿಪ್ರಾಯ ತಿಳಿಸುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...