ಮೈಸೂರಿನಲ್ಲಿ ಪುನೀತ್ ಯುವರತ್ನ ಚಿತ್ರೀಕರಣದ ವೇಳೆ ದರ್ಶನ್ ಫ್ಯಾನ್ಸ್ ಗೆ ಬಿತ್ತಾ ಏಟು?! ನಡೆದಿದ್ದೇನು ಈ ಸುದ್ದಿ ಓದಿ.

Date:

ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾದ ಪುನೀತ್ ರಾಜ್ಕುಮಾರ್ ಅಭಿನಯದ ಯುವ ರತ್ನ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ಇನ್ನು ಈ ಚಿತ್ರದ ಚಿತ್ರೀಕರಣವನ್ನು ಮೈಸೂರಿನಲ್ಲಿ ನಡೆಸಲಾಗುತ್ತಿದ್ದು ಅಲ್ಲಿನ ಯುವರಾಜ ಕಾಲೇಜಿನಲ್ಲಿ ನಿನ್ನೆ ಚಿತ್ರೀಕರಣ ನಡೆಯುತ್ತಿತ್ತು. ಇನ್ನು ಇದೇ ವೇಳೆ ಪುನೀತ್ ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನು ನೋಡಲು ಜೈಕಾರ ಕೂಗುತ್ತಾ ಕಾಯುತ್ತಿದ್ದರು. ಈ ಸಮಯದಲ್ಲಿ ಕೆಲ ದರ್ಶನ್ ಅಭಿಮಾನಿಗಳು “ಜೈ ಡಿ ಬಾಸ್” ಎಂದು ಘೋಷಣೆಯನ್ನು ಗುಂಪಿನ ಮಧ್ಯೆ ಕೂಗಿದ್ದಾರೆ.


ಈ ವಿಷಯಕ್ಕಾಗಿಯೇ ದರ್ಶನ್ ಅಭಿಮಾನಿಗಳ ಗುಂಪು ಮತ್ತು ಪುನೀತ್ ಅಭಿಮಾನಿಗಳ ನಡುವೆ ಮಾತಿನ ಚಕಮಕಿ ನಡೆದಿದೆ ಹಾಗೂ ಆ ಗುಂಪಿನ ಯುವಕರು ಮಾಡುತ್ತಿರುವ ಆರೋಪದ ಪ್ರಕಾರ ಪುನೀತ್ ರಾಜ್ಕುಮಾರ್ ಅವರ ಬೌನ್ಸರ್ ಗಳು ಅವರ ಮೇಲೆ ಕೈ ಮಾಡಿದ್ದಾರಂತೆ. ಹೌದು ಇದೀಗ ಈ ವಿಷಯ ದೊಡ್ಡ ಮಟ್ಟಕ್ಕೆ ತಿರುಗಿದ್ದು ವಿದ್ಯಾರ್ಥಿಗಳ ಗುಂಪು ನ್ಯಾಯ ಬೇಕು ಎಂದು ಧರಣಿಯನ್ನು ಸಹ ನಡೆಸಿದೆ. ಇನ್ನು ಕೆಲ ಜನ ಈ ರೀತಿ ಮಾಡಿದ್ದು ತಪ್ಪು ಎಂದು ಹೇಳಿದರೆ, ಮತ್ತಷ್ಟು ಜನ ಇನ್ನೊಬ್ಬ ಸ್ಟಾರ್ ನಟನ ಚಿತ್ರ ಚಿತ್ರೀಕರಣ ನಡೆಯುತ್ತಿರುವ ಸ್ಥಳಕ್ಕೆ ಹೋಗಿ ಮತ್ತೊಬ್ಬ ಸ್ಟಾರ್ ನಟನಿಗೆ ಜೈಕಾರ ಹಾಕಿದ್ದು ತಪ್ಪು ಇದರಿಂದಲೇ ಇಷ್ಟೆಲ್ಲ ಆಗಿದ್ದು ಎಂದು ಅಭಿಪ್ರಾಯ ತಿಳಿಸುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ

ಕಾರೊಂದು ಸೇತುವೆ ಮೇಲಿಂದ ಉರುಳಿ ಓರ್ವ ಸಾವು, ನಾಲ್ವರು ಗಂಭೀರ ಕೋಲಾರ:- ಜಿಲ್ಲೆ...

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ ಸಿದ್ದರಾ,ಯ್ಯ

ಸಮೀಕ್ಷೆ ನಡೆಸದಿದ್ದರೆ ಸಮಾಜದಲ್ಲಿ ಜನರ ಸ್ಥಿತಿಗತಿ ಬಗ್ಗೆ ಅರಿಯಲು ಸಾಧ್ಯವಿಲ್ಲ: ಸಿಎಂ...

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು?

ಬೆರಳಿನ ಮೇಲೆ ಕೂದಲು ಇದ್ದರೆ ಅದೃಷ್ಟಾನಾ? ಶಾಸ್ತ್ರ ಹೇಳುವುದೇನು? ಕೆಲವರಿಗೆ ಕೈ ಅಥವಾ...

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...