ಮೈಸೂರು ಗ್ಯಾಂಗ್ ರೇಪ್ ಪ್ರಕರಣದ ಹಿಂದಿನ ಕಾರಣ ಬಿಚ್ಚಿಟ್ಟ ಕುಮಾರಸ್ವಾಮಿ

Date:

ಮೈಸೂರು ಗ್ಯಾಂಗ್‌ ಪ್ರಕರಣದ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. “ನಾನು ನಿನ್ನೆಯಿಂದ ಕಾಂಗ್ರೆಸ್-ಬಿಜೆಪಿ ನಾಯಕರ ಪ್ರತಿಕ್ರಿಯೆಗಳನ್ನು ಗಮನಿಸುತ್ತಿದ್ದೇನೆ. ಅದರ ಬಗ್ಗೆ ಪರ-ವಿರೋಧದ ಹೇಳಿಕೆಯನ್ನು ಗಮನಿಸಿದ್ದೇನೆ. ಮೈಸೂರಿನಲ್ಲಿ ಇಂತಹದ್ದೊಂದು ಅಮಾನವೀಯ ಕೃತ್ಯ ನಡೆಯಬಾರದಿತ್ತು” ಎಂದು ವಿಷಾದ ವ್ಯಕ್ತಪಡಿಸಿದರು.

ಶುಕ್ರವಾರ ರಾಮನಗರದ ಚನ್ನಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಉದ್ಯಾನವನ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕುಮಾರಸ್ವಾಮಿ ಮಾಧ್ಯಮಗಳ ಜೊತೆ ಮಾತನಾಡಿದರು.

“ಇದರಲ್ಲಿ ಮೊದಲು ಸರ್ಕಾರದ ವೈಫಲ್ಯವಿದೆ. ಪೊಲೀಸ್ ಇಲಾಖೆ ಅಮಾಯಕರ ಮೇಲೆ ದಬ್ಬಾಳಿಕೆ ನಡೆಸುತ್ತಿದೆ. ಸಾರ್ವಜನಿಕವಾಗಿ ಮದ್ಯಪಾನಕ್ಕೆ ಅವಕಾಶ ಕೊಟ್ಟಿದ್ದೇ ತಪ್ಪು. ಪೊಲೀಸ್ ಇಲಾಖೆಯಲ್ಲಿ ಅಸಮರ್ಥತೆ ಎದ್ದು ಕಾಣಿಸುತ್ತಿದೆ” ಎಂದರು. “ಪೊಲೀಸ್ ಅಧಿಕಾರಿಗಳನ್ನು ಹಣ ಪಡೆದು ವರ್ಗಾವಣೆ ಮಾಡುವುದನ್ನು ನಿಲ್ಲಿಸುವವರೆಗೆ ಪೊಲೀಸ್ ಇಲಾಖೆ ನಿಷ್ಕ್ರಿಯವಾಗಿರುತ್ತದೆ. ನನಗೆ ಈ ಸಂಬಂಧ ಹಲವು ಮಾಹಿತಿಗಳು ಇವೆ ಎಲ್ಲವನ್ನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ, ಸರಕಾರ ಮೊದಲು ತಮ್ಮ ಲೋಪದೋಷಗಳನ್ನು ಸರಿಪಡಿಸಿಕೊಳ್ಳಬೇಕು” ಎಂದು ಸಲಹೆ ನೀಡಿದರು.

 

“ಗ್ರಾಮೀಣ ಭಾಗದಲ್ಲಿ ಮಟ್ಕಾ ದಂಧೆಗಳು ನಡೆಯುತ್ತಿವೆ. ಸರ್ಕಾರ ಸಾರ್ವಜನಿಕ ಪ್ರದೇಶದಲ್ಲಿ ಅಕ್ರಮ ಚಟುವಟಿಕೆಗಳಿಗೆ ಅವಕಾಶ ಕೊಡಬಾರದು. ಉತ್ತರ ಪ್ರದೇಶ, ದೆಹಲಿಯಂತಾ ಕಡೆಗಳಲ್ಲಿ ನಡೆದ ಇಂತಹ ಅಮಾನವೀಯ ಘಟನೆಗಳು ರಾಜ್ಯದಲ್ಲಿ ನಡೆಯುತ್ತಿವೆ” ಎಂದು ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದರು.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...