ಮೊಮ್ಮಕ್ಕಳನ್ನು ಮುಂದಿಟ್ಟುಕೊಂಡು ಮಾಸ್ಟರ್ ಪ್ಲಾನ್ ರೆಡಿಮಾಡುತ್ತಿದ್ದಾರೆ ದೇವೇಗೌಡರು..!

Date:

ಕಾಂಗ್ರೆಸ್ ಪಕ್ಷದ ಬೆಂಬಲದಿಂದ ರಾಜ್ಯದಲ್ಲಿ ಸ್ಥಿತ್ವದಲ್ಲಿರುವ ಮೈತ್ರಿ ಸರಕಾರ ಎಷ್ಟು ದಿನ ನಡೆಯುತ್ತದೋ ನಡೆಯಲಿ ಆದರೆ ಅದರ ಜತೆ ಜತೆಯಲ್ಲೇ ಪಕ್ಷದ ಸಂಘಟನೆ ಮಾಡೋಣ ಎಂಬ ತೀರ್ಮಾನಕ್ಕೆ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ದೇವೇಗೌಡರು ಬಂದಂತೆ ಕಾಣುತ್ತಿದೆ.

ಕಾಂಗ್ರೆಸ್ ನಾಯಕರು ಯಾವಾಗ ಬೇಕಾದರೂ ಕೈ ಕೊಡಬಹುದು ಇಂತಹ ಪರಿಸ್ಥಿಯಲ್ಲಿ ಮಧ್ಯಂತರ ಚುನಾವಣೆ ಬಂದರೆ ಆಗ ಪಕ್ಷ ಸಂಘಟನೆಗೆ ಮಾಡಲು ಸಾಧ್ಯವಶಗುವುದಿಲ್ಲ ಆದ್ದರಿಂದ ಈಗಿನಿಂದಲೇ ಪಾದಯಾತ್ರೆ, ಸಭೆ, ಸಮಾರಂಭಗಳ ಮೂಲಕ ಜನರ ಹತ್ತಿರ ಹೋದರೆ ಪಕ್ಷದ ಸಂಘಟನೆಯೂ ಆಗುತ್ತದೆ ಜೊತೆಗೆ ಚುನಾವಣೆ ನಡೆದರೆ ಲಾಭವೂ ಸಿಗುತ್ತದೆ ಎಂಬ ಲೆಕ್ಕಾಚಾರವನ್ನು ದೊಡ್ಡ ಗೌಡರು ಹಾಕಿಕೊಂಡಿದ್ದಾರೆ.

ಇದಕ್ಕೆ ಇಂದು ಮಾಸ್ಟರ್ ಪ್ಲಾನ್ ಮಾಡಿಕೊಂಡಿರುವ ದೇವೇಗೌಡರು ತಮ್ಮ ಮೊಮ್ಮಕ್ಕಳಾದ ನಿಖಿಲ್ ಕುಮಾರಸ್ವಾಮಿ ಹಾಗೂ ಪ್ರಜ್ವಲ್ ರೇವಣ್ಣರನ್ನು ಮುಂದಿಟ್ಟುಕೊಂಡು ಪಕ್ಷದ ಸಂಘಟನೆಗೆ ಇಳಿಯುವ ಚಿಂತನೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಮೈತ್ರಿ ಸರಕಾರ ಹೆಚ್ಚು ದಿನ ಉಳಿಯಲ್ಲ ಎಂಬ ಅನುಮಾನ ದೇವೇಗೌಡರಿಗೆ ಬಂದಿರುವ ಕಾರಣ ಮಧ್ಯಂತರ ಚುನಾವಣೆ ಎದುರಾದರೆ ಪಕ್ಷ ಅನಿವಾರ್ಯವಾಗಿ ಸ್ಪರ್ಧೆ ಮಾಡಲೇ ಬೇಕಾಗುತ್ತದೆ ಆದ್ದರಿಂದ ಈಗಿನಿಂದಲೇ ಕಾರ್ಯಪ್ರವೃತ್ತರಾದರೆ ಪಕ್ಷಕ್ಕೆ ಲಾಭವಾಗುತ್ತದೆ ಎಂಬ ಚಿಂತನೆ ದೇವೇಗೌಡರದ್ದಾಗಿದೆ.

 

Share post:

Subscribe

spot_imgspot_img

Popular

More like this
Related

ಶೈಲಪುತ್ರಿಯ ಆರಾಧನೆ ಹೇಗೆ ಗೊತ್ತಾ ?

ಶೈಲಪುತ್ರಿ ಪೂಜಾ ವಿಧಾನ ಹೇಗೆ ಗೊತ್ತಾ ? ನವರಾತ್ರಿ ಬಂದೆ ಬಿಡ್ತು, ಮೊದಲನೇ...

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ ಬಾಗಲಕೋಟೆ: ಕೂಡಲಸಂಗಮ...

ಪ್ರಧಾನಿ ಮೋದಿ ಇಂದು ಸಂಜೆ ರಾಷ್ಟ್ರವನ್ನುದ್ದೇಶಿಸಿ ಭಾಷಣ

ಪ್ರಧಾನಿ ಮೋದಿ ಇಂದು ಸಂಜೆ ರಾಷ್ಟ್ರವನ್ನುದ್ದೇಶಿಸಿ ಭಾಷಣ ನವದೆಹಲಿ: ಪ್ರಧಾನಿ ನರೇಂದ್ರ ಮೋದಿ...

ಒಕ್ಕಲಿಗ ಸಮಾಜದ ಅಭಿಪ್ರಾಯದ ಬಗ್ಗೆ ಮಾತನಾಡಲು ಹೋಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಒಕ್ಕಲಿಗ ಸಮಾಜದ ಅಭಿಪ್ರಾಯದ ಬಗ್ಗೆ ಮಾತನಾಡಲು ಹೋಗುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರು:...