ಮೋದಿ, ಅಮಿತ್ ಶಾಗೆ ನೇರಾನೇರ ಸವಾಲೆಸೆದ ಮಾಜಿ ಜಿಲ್ಲಾಧಿಕಾರಿ!

Date:

ಎಲ್ಲರನ್ನು ದೇಶದ ಬಗ್ಗೆ ಪ್ರಶ್ನಿಸುತ್ತಿದ್ದ ಮೋದಿ ಸರಕಾರ ಈಗ ಭಾರತೀಯರನ್ನೇ ನಿಮ್ಮ ದೇಶ ಯಾವುದೆಂದು ಪ್ರಶ್ನಿಸುತ್ತಿದ್ದಾರೆ. ಇಲ್ಲೇ ಅವರು ತಪ್ಪು ಮಾಡಿರುವುದು. ದೇಶವನ್ನು ವಿಂಗಡಣೆ ಮಾಡಲು ಹೊರಟಿದ್ದಾರೆ. ಸಾವಿರ ವರ್ಷವಾದರೂ ನಿಮಗೆ ಹಿಂದೂ ರಾಷ್ಟç ಮಾಡಲು ಸಾಧ್ಯವಿಲ್ಲವೆಂದು ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ ಸೆಂಥಿಲ್ ಪ್ರಧಾನಿ ಮೋದಿ ಮತ್ತು ಕೇಂದ್ರ ಗೃಹಸಚಿವ ಅಮಿತ್ ಶಾಗೆ ಸವಾಲೆಸೆದರು.
ಉಳ್ಳಾಲ ಮುಸ್ಲಿಂ ಒಕ್ಕೂಟ ಭಾನುವಾರ ಉಳ್ಳಾಲ ಹಝ್ರತ್ ಶಾಲೆ ಬಳಿಯ ಮೈದಾನದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಹಮ್ಮಿಕೊಂಡಿದ್ದ ಸಮಾನ ಮನಸ್ಕರ ಸಭೆಯಲ್ಲಿ ಮಾತನಾಡಿದರು. ಇದುವರೆಗೆ ದೇಶದ ಬಗ್ಗೆ ಮಾತನಾಡುವವರು ಇದೀಗ ಪಾಕಿಸ್ತಾನದ ಕುರಿತು ಮಾತನಾಡುತ್ತಿದ್ದಾರೆ. ಎನ್ ಆರ್ ಸಿ ಬೇಕೆಂದು ಯಾರೂ ಕೇಳಿಲ್ಲ. ದೇಶದ ಹೆಸರು ಹೇಳಿಕೊಂಡು ಚುನಾವಣೆಯಲ್ಲಿ ಗೆದ್ದು ಜನಸಾಮಾನ್ಯರ ಭಾವನೆಗಳ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ಪ್ರಜಾಪ್ರಭುತ್ವವೆಂದರೆ ಜನರೇ ತೋರಿಸಿಕೊಟ್ಟಿದ್ದಾರೆ ಎಂದು ಗುಡುಗಿದರು.
ಎನ್ ಆರ್ ಸಿ, ಸಿ ಎ ಎ ಮೂಲಕ ಜನರ ಮೇಲೆ ಸವಾರಿ ಮಾಡಲು ಸರಕಾರ ಚಿಂತನೆ ನಡೆಸಿರಬಹುದು. ಆದರೆ ಜನರನ್ನು ವಿಂಗಡಿಸಿ ಸಂಘರ್ಷ ಸೃಷ್ಟಿ ಮಾಡಲು ಸಾಧ್ಯವಿಲ್ಲ. ಎನ್ ಆರ್ ಸಿಗೆ ಬದ್ಧರಾಗಲು ತಯಾರಿಲ್ಲ. ಇದರಲ್ಲಿ ಯಶಸ್ವಿ ಆಗಲು ಸಾಧ್ಯವಿಲ್ಲ. ನನ್ನನ್ನು ಜೈಲಿಗೆ ಕಳುಹಿಸುವುದಾದರೆ ಮೊದಲು ಮಾಹಿತಿ ನೀಡಿ ಕಳುಹಿಸಲಿ. ಗೃಹಸಚಿವರಿಗೆ ಪತ್ರವನ್ನೂ ಬರೆದಿದ್ದೇನೆ ಎಂದಿದ್ದಾರೆ.

Share post:

Subscribe

spot_imgspot_img

Popular

More like this
Related

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ

ಮಂಡ್ಯದಲ್ಲಿ ಮನಕಲಕುವ ಘಟನೆ: ಸಾವಿನಲ್ಲೂ ಒಂದಾದ ದಂಪತಿ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ...

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!

ಐಷಾರಾಮಿ ಜೀವನಕ್ಕಾಗಿ ಕಳ್ಳತನ ಮಾಡ್ತಿದ್ದ ಇಬ್ಬರು ಅರೆಸ್ಟ್!ಬೆಂಗಳೂರು: ಐಷಾರಾಮಿ ಜೀವನಕ್ಕಾಗಿ ಕಳ್ಳತನ...

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...