ಬಹುಮತ ನರೇಂದ್ರ ಮೋದಿಗೆ ಸಿಎಂ ಕುಮಾರಸ್ವಾಮಿ ಅಭಿನಂದನೆ ಸಲ್ಲಿಸಿದ್ದಾರೆ. ಟ್ವೀಟ್ ಮಾಡುವ ಮೂಲಕ ಸಿಎಂ ಕುಮಾರಸ್ವಾಮಿ ಹೀಗೆ ಹೇಳಿದ್ದಾರೆ..?
ಈ ಲೋಕಸಭಾ ಚುನಾವಣೆ ಫಲಿತಾಂಶ ಅನಿರೀಕ್ಷಿತ. ಆದರೂ ಈ ಫಲಿತಾಂಶವನ್ನು ಗೌರವಿಸುತ್ತೇನೆ. ಜನಾದೇಶ ಪಡೆದ ಪ್ರಧಾನಿ ನರೇಂದ್ರ ಮೋದಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ರಾಜ್ಯದಲ್ಲಿ ಗೆಲುವು ಸಾಧಿಸಿದ ಎಲ್ಲ ಅಭ್ಯರ್ಥಿಗಳಿಗೂ ನನ್ನ ಶುಭಾಶಯಗಳು.
ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಗಳ ಸೋಲಿನ ಕುರಿತು ಎರಡೂ ಪಕ್ಷಗಳ ನಾಯಕರು ಚರ್ಚಿಸುತ್ತೇವೆ. ರಾಜಕೀಯದಲ್ಲಿ ನಮ್ಮ ಪಕ್ಷವು ಹಲವು ಸೋಲು-ಗೆಲುವುಗಳನ್ನು ಕಂಡಿದೆ. ಸೋಲಿನಿಂದ ಪಕ್ಷದ ಕಾರ್ಯಕರ್ತರು ಯಾರೂ ಎದೆಗುಂದಬೇಕಾಗಿಲ್ಲ.
ಮುಂದಿನ ದಿನಗಳಲ್ಲಿ ಪಕ್ಷವನ್ನು ಬಲ ಪಡಿಸಲು ಜೊತೆಯಾಗಿ ಶ್ರಮಿಸೋಣ. ಚುನಾವಣೆ ಸಂದರ್ಭದಲ್ಲಿ ಸಹಕರಿಸಿದ ಮೈತ್ರಿ ಪಕ್ಷಗಳ ಎಲ್ಲ ಕಾರ್ಯಕರ್ತರಿಗೆ ತುಂಬು ಹೃದಯದ ಧನ್ಯವಾದಗಳು ಅಂತಾ ಟ್ವೀಟ್ ಮಾಡಿದ್ದಾರೆ. ಈ ಮೂಲಕ ಪರೋಕ್ಷವಾಗಿ ಸೋಲಿನ ಹೊಣೆಯನ್ನು ಹೊತ್ತುಕೊಂಡಿದ್ದಾರೆ.