ಯಡಿಯೂರಪ್ಪಗೆ ಅಧಿಕಾರ ತಪ್ಪಿಸಲು ಭಾರೀ ಸ್ಕೆಚ್ ! ಯಾರಿಂದ ? ಯಾಕೆ?

Date:

ರಾಜ್ಯ ಬಿಜೆಪಿಯಲ್ಲಿ ಲೋಕಸಭೆ ಚುನಾವಣೆ ಸಮೀಕ್ಷೆ ಬಿಡುಗಡೆ ಬೆನ್ನಲ್ಲೇ‌ ಮತ್ತೆ ಕಿತ್ತಾಟ ಕಾಣಿಸಿಕೊಂಡಿದೆ. ಬಿ.ಎಸ್.ಯಡಿಯೂರಪ್ಪಗೆ ಅಧಿಕಾರ ತಪ್ಪಿಸಲು ತೆರೆಮರೆಯಲ್ಲೇ‌ ನಡೆಯುತ್ತಿದೆ ಸ್ಕೆಚ್? ಎನ್ನುವ ಅನುಮಾನ ವ್ಯಕ್ತವಾಗತೊಡಗಿದೆ.

ಒಂದು‌ ಕಡೆ ರಾಜ್ಯದಲ್ಲಿ ಅಧಿಕಾರಕ್ಕೆ ಬಿಜೆಪಿ ಕಚೇರಿಯಲ್ಲಿ ಸುದರ್ಶನ ಹೋಮ ನಡೆಯುತ್ತಿದ್ದರೆ, ಮತ್ತೊಂದೆ ಚುರುಕು ಪಡೆದ ಭಿನ್ನಮತ ಚಟುವಟಿಕೆ ಭಾರೀ ಪ್ರಮಾಣದಲ್ಲಿ ಕಾಣಿಸಿಕೊಂಡಿದೆ.
ಈ ಬಾರಿ ಭಿನ್ನಮತ ಚಟುವಟಿಕೆಗೆ ಅಖಾಡಕ್ಕೆ ಇಳಿದವರು ಯಾರು? ಅನ್ನೋ ಕುತೂಹಲ ಮೂಡಿದೆ. ಒಂಟಿಯಾದ ಆ ನಾಯಕರಿಂದ ಪರ್ಯಾಯ ನಾಯಕರ ಸೃಷ್ಟಿಗೆ ತಯಾರಿ ನಡೆಯುತ್ತಿದೆಯಂತೆ.

ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅಖಾಡಕ್ಕೆ ಧುಮುಕಿದ್ದಾರೆ ಎನ್ನಲಾಗಿದೆ.ಚುನಾವಣೆ ಸಮೀಕ್ಷೆಯಲ್ಲಿ ಬಿಜೆಪಿಗೆ ಬಹುಮತ ಲಭ್ಯವಾಗಲಿದೆ. ಇದರಿಂದ‌ ಕೇಂದ್ರದಲ್ಲಿ ಮತ್ತೆ ಮೋದಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ಇದರಿಂದ ಕರ್ನಾಟಕ ರಾಜ್ಯ ಸರ್ಕಾರದ ಮೇಲೂ ಪರಿಣಾಮ ಬೀರಲಿದೆ.

ಕಾಂಗ್ರೆಸ್ ಶಾಸಕರು ಬಿಜೆಪಿಗೆ ಬಂದ್ರೆ ಬಿಜೆಪಿ ಸರ್ಕಾರ ನಿಶ್ಚಿತವಾಗಿ ರಚನೆ ಆಗುತ್ತದೆ. ಆಗ ಬಿ.ಎಸ್. ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿ ಆಗ್ತಾರೆ. ಹೀಗಾಗಿ ಯಡಿಯೂರಪ್ಪಗೆ ಅಧಿಕಾರ ತಪ್ಪಿಸಲು ಮತ್ತೆ ನಡೆಯುತ್ತಿದೆಯಾ ತಯಾರಿ? ಎನ್ನುವ ಮಾತುಗಳು ಕೇಳಿಬರಲಾರಂಭಿಸಿವೆ. ತೆರೆ ಮರೆಯಲ್ಲಿ ಇದ್ದ ಯಡಿಯೂರಪ್ಪ ಬಿ.ಎಲ್. ಸಂತೋಷ್ ಮುಸುಕಿನ ಗುದ್ದಾಟ ಹೊರಗೆ ಕಾಣಿಸಲಾರಂಭಿಸಿದೆ. ಈಗ 40 ಪ್ರಮುಖ ನಾಯಕರನ್ನ ಕರೆದುಕೊಂಡು ಅಂಡಮಾನ್ ಗೆ ಹಾರಿದ್ದಾರೆ ಬಿ.ಎಲ್. ಸಂತೋಷ್.

ಸಿ.ಟಿ.ರವಿ, ನಿರ್ಮಲ್ ಕುಮಾರ್ ಸುರಾನಾ, ಭಾನುಪ್ರಕಾಶ್ ಜೊತೆಗೆ ಎಲ್ಲ ಜಿಲ್ಲೆಯ ಸಂಘಟನಾ ಕಾರ್ಯದರ್ಶಿಗಳು ಅಂಡಮಾನ್‌ಗೆ ತೆರಳಿದ್ದಾರೆ.
ಅಷ್ಟೊಂದು ‌ಪ್ರಮಾಣದ ನಾಯಕರನ್ನ ಅಂಡಮಾನ್‌ಗೆ ಕರೆದೊಯ್ದ ಹಿಂದಿದೆಯಾ ಬಹುದೊಡ್ಡ ಹುನ್ನಾರ? ಎನ್ನುವ ಚರ್ಚೆ ಶುರುವಾಗಿದೆ. ಯಡಿಯೂರಪ್ಪಗೆ ಮುಖ್ಯಮಂತ್ರಿ ಹುದ್ದೆ ತಪ್ಪಿಸಲು ನಡೆಯುತ್ತಿದೆಯಾ ತಯಾರಿ? ಎನ್ನುವ ಪ್ರಶ್ನೆಯೂ ಕೇಳಿಬರತೊಡಗಿದೆ.

Share post:

Subscribe

spot_imgspot_img

Popular

More like this
Related

ದೇಹದ ಮೇಲೆ ಕಾಣಿಸುವ ಹುಟ್ಟುಮಚ್ಚೆಗಳು ಆರೋಗ್ಯಕ್ಕೆ ಅಪಾಯವೇ?

ದೇಹದ ಮೇಲೆ ಕಾಣಿಸುವ ಹುಟ್ಟುಮಚ್ಚೆಗಳು ಆರೋಗ್ಯಕ್ಕೆ ಅಪಾಯವೇ? ದೇಹದ ಮೇಲೆ ಹುಟ್ಟುಮಚ್ಚೆಗಳು ಇರುವುದು...

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...