ಯಡಿಯೂರಪ್ಪ ಈ ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ಏನ್​ ಕಡಿದು ಕಟ್ಟೆ ಹಾಕಿದ್ದಾರೆ ಎಂದು ಎಲ್ರಿಗೂ ಗೊತ್ತಿದೆ !? ಸಿದ್ದರಾಮಯ್ಯ

Date:

ಯಡಿಯೂರಪ್ಪ ಈ ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ಏನ್​ ಕಡಿದು ಕಟ್ಟೆ ಹಾಕಿದ್ದಾರೆ ಎಂಬುದು ನಿಮಗೆ ಗೊತ್ತಿದೆ. ಅವರು ಮತ್ತೊಮ್ಮೆ ಮುಖ್ಯಮಂತ್ರಿ ಆಗೋದು ಯಾಕೆ, ರಾಜ್ಯವನ್ನ ಲೂಟಿ ಮಾಡೊಕ್ಕಾ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಬಿಎಸ್​ವೈ ವಿರುದ್ಧ ಕಿಡಿಕಾರಿದ್ದಾರೆ.

ಕುಂದಗೋಳ ಉಪ-ಚುನಾವಣೆ ಹಿನ್ನೆಲೆಯಲ್ಲಿ ಬೆಳಗಲಿ ಗ್ರಾಮದಲ್ಲಿ ರೋಡ್‌ಶೋ ವೇಳೆ ಮಾತನಾಡಿದ ಅವರು, ಬಿಜೆಪಿಯವರು ಕೇವಲ ಮಾತನಾಡುತ್ತಾರೆ, ಅವರ ಮಾತಿನಿಂದ ಬಡವರ ಹೊಟ್ಟೆ ತುಂಬುವುದಿಲ್ಲ. ಮೋದಿ ಬಡವರ ಸಾಲ ಮನ್ನಾ ಮಾಡಲಿಲ್ಲ, ಶ್ರೀಮಂತರ ಸಾಲ ಮನ್ನಾ ಮಾಡಿದ್ರು. ಬಿಜೆಪಿಯವರು ಮತ ಕೇಳಲು ಬಂದಾಗ, ಅವರಿಗೆ ಮೊದಲು ₹15 ಲಕ್ಷ ಕೊಡಿ ಆಮೇಲೆ ಮತ ಕೇಳಿ ಅಂತಾ ಹೇಳಿ.  ಮೇಲಾಗಿ ಶಿವಳ್ಳಿ ರಾಜಕಾರಣಿಗಿಂತ, ಒಬ್ಬ ಜನ ಸೇವಕ. ಶಿವಳ್ಳಿ ತಮ್ಮ ಆರೋಗ್ಯದ ಬಗ್ಗೆ ಗಮನ ಕೊಡಲಿಲ್ಲ. ಗಮನ ಕೊಟ್ಟಿದ್ದರೆ,

ನಾವು ಇವತ್ತು ಅವನನ್ನ ಕಳೆದುಕೊಳ್ಳುತ್ತಿರಲಿಲ್ಲ. ಮಂತ್ರಿಯಾಗಿ ಮೂರು ತಿಂಗಳ ಇದ್ದ ಶಿವಳ್ಳಿಯ ಅವರ ಜಾಗವನ್ನ ಭರ್ತಿ ಮಾಡಬೇಕಾದ್ರೆ, ಅವರ ಧರ್ಮಪತ್ನಿ ಕುಸುಮಾ ಶಿವಳ್ಳಿಗೆ ಮತ ಹಾಕಿ. ಕ್ಷೇತ್ರದ ಜನ ಅವರಿಗೆ ಆಶೀರ್ವಾದ ಮಾಡಬೇಕು ಅಂತಾ ಕರೆ ನೀಡಿದ್ರು.

Share post:

Subscribe

spot_imgspot_img

Popular

More like this
Related

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌ 

ನ.16ಕ್ಕೆ ಚಿತ್ತಾಪುರದಲ್ಲಿ RSS ಪಥಸಂಚಲನಕ್ಕೆ ಹೈಕೋರ್ಟ್ ಗ್ರೀನ್‌ ಸಿಗ್ನಲ್!‌  ಕಲಬುರಗಿ: ಕಲಬುರಗಿ ಜಿಲ್ಲೆಯ...

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್. ರಾಜಣ್ಣ

ನಾನು ಯಾವ ಬಾವುಟ ಹಿಡಿಬೇಕು ಅಂತ ಮುಂದೆ ತೀರ್ಮಾನ ಮಾಡುತ್ತೇನೆ: ಕೆ.ಎನ್....

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ ಗೋಲ್ಡ್ ರೇಟ್

Gold Price Today: ಮತ್ತೆ ಏರಿಕೆಯತ್ತ ಚಿನ್ನದ ಬೆಲೆ! ಹೀಗಿದೆ ಇಂದಿನ...

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್

ಮುಸ್ಲಿಮರ ಪರವಾದ ಮೃದುವಾದ ಧೋರಣೆ ಸರ್ಕಾರಕ್ಕೆ ಒಳ್ಳೆಯದಲ್ಲ: ಆರ್.ಅಶೋಕ್ ಬೆಂಗಳೂರು: ಮುಸ್ಲಿಮರ ಪರವಾದ...