ಯಡಿಯೂರಪ್ಪ ರಾಜೀನಾಮೆ; ಶಿಕಾರಿಪುರ ಬಂದ್

Date:

ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂದಿನ ಮುಖ್ಯಮಂತ್ರಿ ಆಯ್ಕೆಯಾಗುವ ತನಕ ಅವರು ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ.

ಸೋಮವಾರ ಯಡಿಯೂರಪ್ಪ ರಾಜೀನಾಮೆ ನೀಡುತ್ತಿದ್ದಂತೆಯೇ ತವರು ಕ್ಷೇತ್ರ ಶಿಕಾರಿಪುರದಲ್ಲಿ ಸ್ವಯಂ ಪ್ರೇರಿತವಾಗಿ ಬಂದ್ ಮಾಡಲಾಗಿದೆ. ಅಂಗಡಿಗಳನ್ನು ವ್ಯಾಪಾರಿಗಳು ಮುಚ್ಚಿದ್ದು, ಶಿಕಾರಿಪುರದಲ್ಲಿ ನೀರವ ಮೌನ ಆವರಿಸಿದೆ. ಯಡಿಯೂರಪ್ಪ ಹುಟ್ಟಿದ್ದು ಮಂಡ್ಯ ಜಿಲ್ಲೆಯ ಬೂಕನಕೆರೆಯಲ್ಲಿ. ಆದರೆ ಅವರು ರಾಜಕೀಯವಾಗಿ ಬೆಳೆದಿದ್ದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ. ಶಿಕಾರಿಪುರ ಪುರಸಭೆ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ರಾಜಕೀಯ ಪ್ರವೇಶ ಮಾಡಿದರು.

ಪ್ರಸ್ತುತ ಯಡಿಯೂರಪ್ಪ ಶಿಕಾರಿಪುರ ಕ್ಷೇತ್ರದ ಶಾಸಕರು. ತಮ್ಮ ನೆಚ್ಚಿನ ನಾಯಕನ ರಾಜೀನಾಮೆ ಹಿನ್ನಲೆಯಲ್ಲಿ ಅವರ ಅಭಿಮಾನಿಗಳು ಸ್ವಯಂ ಪ್ರೇರಿತವಾಗಿ ಅಂಗಡಿಗಳನ್ನು ಮುಚ್ಚಿ ಬಂದ್ ಮಾಡಿದ್ದಾರೆ. ಯಡಿಯೂರಪ್ಪ 4 ಬಾರಿ ರಾಜ್ಯದ ಮುಖ್ಯಮಂತ್ರಿಯಾದರೂ ಒಂದು ಬಾರಿಯೂ ಸಹ ಅಧಿಕಾರ ಪೂರ್ಣಗೊಳಿಸಿಲ್ಲ ಎಂಬುದು ಅವರ ಅಭಿಮಾನಿಗಳಿಗೆ ಬೇಸರ ತರಿಸಿದೆ. ಶಿಕಾರಿಪುರದ ಶಾಸಕರಾಗಿ, ಶಿವಮೊಗ್ಗದ ಸಂಸದರಾಗಿ ಯಡಿಯೂರಪ್ಪ ಕಾರ್ಯ ನಿರ್ವಹಣೆ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...