ಯತ್ನಾಳ್ ಕಾಂಗ್ರೆಸ್ ಪಕ್ಷಕ್ಕೆ ಬರುತ್ತೇನೆಂದರೆ ಖಂಡಿತ ಸೇರಿಸಿಕೊಳ್ಳುತ್ತೇವೆ: ಶಾಸಕ ರಾಜು ಕಾಗೆ
ಹುಬ್ಬಳ್ಳಿ: ಯತ್ನಾಳ್ ಕಾಂಗ್ರೆಸ್ ಪಕ್ಷಕ್ಕೆ ಬರುತ್ತೇನೆಂದರೆ ಖಂಡಿತ ಸೇರಿಸಿಕೊಳ್ಳುತ್ತೇವೆ ಎಂದು ಶಾಸಕ ರಾಜು ಕಾಗೆ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಉಚ್ಚಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಪಕ್ಷ ಸೇರಬಯಸಿದರೆ ಅವರಿಗೆ ಸ್ವಾಗತವಿದೆ, ಯಾವುದೇ ಅಭ್ಯಂತರವಿಲ್ಲ ಎಂದು ಕಾಂಗ್ರೆಸ್ ಶಾಸಕ ರಾಜು ಕಾಗೆ ಹೇಳಿದರು.
ಬೆಲೆ ಏರಿಕೆ ವಿಚಾರವಾಗಿ, ಬೆಲೆ ಏರಿಕೆ ಅಷ್ಟು ಹೊರೆ ಆಗುವುದಿಲ್ಲ. ನಮಗೂ ಇತಿ ಮಿತಿ ಇದೆ. ಹೊಸ ಬಸ್ ನಿಲ್ದಾಣದ ನಿರ್ಮಾಣ, ಹೊಸ ಬಸ್ ಖರೀದಿ ಮಾಡುತ್ತಿದ್ದೆವೆ. ವ್ಯವಸ್ಥೆಯನ್ನು ಸರಿ ಮಾಡಬೇಕು. ಲಾಭ ನಷ್ಟವಿಲ್ಲದೇ ಸಂಸ್ಥೆ ನಡೆಯಬೇಕು ಎಂದು ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.