ಯಾರು ಗೊತ್ತಾ ರಶ್ಮಿಕಾ ಮಂದಣ್ಣ ಫೇವರಿಟ್ ಕ್ರಿಕೆಟರ್?

Date:

14ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಮಧ್ಯದಲ್ಲಿಯೇ ಮೊಟಕುಗೊಂಡಿದೆ. ಟೂರ್ನಿಯಲ್ಲಿ ಇದುವರೆಗೂ 29 ಪಂದ್ಯಗಳು ಯಶಸ್ವಿಯಾಗಿ ನಡೆದಿದ್ದು ಕೆಲ ಆಟಗಾರರಲ್ಲಿ ಕೊರೊನಾವೈರಸ್ ಸೋಂಕು ಕಾಣಿಸಿಕೊಂಡ ಕಾರಣ ಬಿಸಿಸಿಐ ಐಪಿಎಲ್ ಟೂರ್ನಿಯನ್ನು ಮುಂದೂಡಿದ್ದು, ಸೆಪ್ಟೆಂಬರ್ ತಿಂಗಳಿನಲ್ಲಿ ಉಳಿದ 31 ಪಂದ್ಯಗಳು ಇಂಗ್ಲೆಂಡ್ ಅಥವಾ ಯುಎಇಯಲ್ಲಿ ನಡೆಯಲಿವೆ ಎಂಬ ಸುದ್ದಿ ಹರಿದಾಡುತ್ತಿದೆ.

 

ಪ್ರಸ್ತುತ ಐಪಿಎಲ್ ಟೂರ್ನಿಯ ಕುರಿತು ಇತ್ತೀಚೆಗಷ್ಟೇ ನಟಿ ರಶ್ಮಿಕಾ ಮಂದಣ್ಣ ಮಾತನಾಡಿದ್ದರು. ಇನ್ಸ್ಟಾಗ್ರಾಂ ಲೈವ್ ವೇಳೆ ಅಭಿಮಾನಿಯೊಬ್ಬ ನಿಮ್ಮ ನೆಚ್ಚಿನ ಐಪಿಎಲ್ ತಂಡ ಯಾವುದು ಎಂದು ಕೇಳಿದಾಗ ನಟಿ ರಶ್ಮಿಕಾ ಈ ಸಲ ಕಪ್ ನಮ್ದೇ ಎಂದು ಹೇಳುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ನೆಚ್ಚಿನ ತಂಡ ಎಂಬುದನ್ನು ತಿಳಿಸಿದ್ದರು. ರಶ್ಮಿಕಾ ಮಂದಣ್ಣ ನೀಡಿದ್ದ ಈ ಉತ್ತರ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ನೆಚ್ಚಿನ ಐಪಿಎಲ್ ತಂಡ ಎಂದು ಹೆಸರಿಸಿದ್ದ ರಶ್ಮಿಕಾ ಮಂದಣ್ಣ ಅದೇ ಲೈವ್‌ನಲ್ಲಿ ತನ್ನ ನೆಚ್ಚಿನ ಆಟಗಾರನನ್ನೂ ಸಹ ಹೆಸರಿಸಿದ್ದರು. ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂಎಸ್ ಧೋನಿ ತನ್ನ ನೆಚ್ಚಿನ ಆಟಗಾರ ಎಂದು ರಶ್ಮಿಕಾ ಮಂದಣ್ಣ ತಿಳಿಸಿದ್ದರು. ಧೋನಿಯ ನಾಯಕತ್ವ, ಬ್ಯಾಟಿಂಗ್ ಮತ್ತು ವಿಕೆಟ್ ಕೀಪಿಂಗ್ ಬಲು ಇಷ್ಟ ಎಂದು ಹೇಳಿದ ರಶ್ಮಿಕಾ ಮಂದಣ್ಣ ಧೋನಿ ನನ್ನ ಹೀರೋ ಎಂದು ತಿಳಿಸಿದ್ದಾರೆ.

 

ಪ್ರಸ್ತುತ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಎರಡೂ ತಂಡಗಳು ಸಹ ಉತ್ತಮ ಪ್ರದರ್ಶನವನ್ನು ನೀಡಿದ್ದು ಅಂಕಪಟ್ಟಿಯ ಟಾಪ್ 4ರಲ್ಲಿ ಸ್ಥಾನ ಪಡೆದುಕೊಳ್ಳುವುದರ ಮೂಲಕ ಕಪ್ ಗೆಲ್ಲುವ ರೇಸ್‌ನಲ್ಲಿವೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...