No menu items!
9.9 C
Munich
Wednesday, May 6, 2026

ಯಾರು ಪಕ್ಷದ ಸಿದ್ಧಾಂತವನ್ನು ಒಪ್ಪಿ ಬರ್ತಾರೆ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ತಿವಿ !

Must read

ಬೆಂಗಳೂರು: ಬ್ರೇಕ್ ಫಾಸ್ಟ್ ಸಭೆಯಲ್ಲಿ ಆಪರೇಷನ್ ಹಸ್ತದ ಬಗ್ಗೆ ಚರ್ಚೆಯೇ ಆಗಿಲ್ಲ. ಯಾರೆಲ್ಲಾ ಬರ್ತಾರೋ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿಕೊಳ್ತೇವೆ. ನಾವು ಯಾವುದೇ ಆಪರೇಷನ್ ಮಾಡುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಆಪರೇಷನ್ ಕಮಲ ಮಾಡಲ್ಲ. ಯಾರು ಪಕ್ಷದ ಸಿದ್ಧಾಂತವನ್ನು ಒಪ್ಪಿ ಬರ್ತಾರೆ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ತಿವಿ ಎಂದು ಹೇಳಿದ್ದಾರೆ.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಇಂದು ದೇಶ ಆರ್ಥಿಕವಾಗಿ ದಿವಾಳಿಯಾಗಿದೆ. ರಾಜ್ಯಕ್ಕೆ ಕೊಡಬೇಕಾದನ್ನೇ ಇನ್ನ ಅವರು ಕೊಟ್ಟಿಲ್ಲ. ಅವರು ರಾಜಕೀಯ ಭಾಷಣ ಮಾಡಿದ್ದಾರೆ. ದಾಖಲಾತಿಗಳನ್ನು ಇಟ್ಟು ಮಾತನಾಡಲಿ ಬೇಕಾದ್ರೆ, ಸುಳ್ಳು ಹೇಳಬಾರದು ಎಂದು ಚಾಟಿ ಬೀಸಿದ್ದಾರೆ.

- Advertisement -spot_img

More articles

- Advertisement -spot_img

Latest article