:ಯಾರೋ ಒಬ್ರು ಎಲ್ಲಿಗೋ ಹೋಗಿ ಬಂದ್ರು’ : ಸಿಎಂ ಟಾಂಗ್!

Date:

ಬೆಂಗಳೂರು: ನನ್ನ ಮುಂದೆ ಇರುವುದು ಕೋವಿಡ್ ನಿರ್ವಹಣೆ ಕೆಲಸ ಮಾತ್ರ. ಯಾರೋ ಒಬ್ಬರು ಎಲ್ಲಿಗೋ ಹೋಗಿ ಬಂದ್ರು ಅಂದ್ರೆ, ಅವರಿಗೆ ಉತ್ತರ ಕೊಟ್ಟು ಕಳಿಸಿದ್ದಾರಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ.

ವಿಧಾನಸೌಧದದಲ್ಲಿ ನಾಯಕತ್ವ ಬದಲಾವಣೆ ಯತ್ನ ಸಂಬಂಧ ಪ್ರತಿಕ್ರಿಯೆ ನೀಡಿದ ಅವರು, ಕೊರೊನಾ ನಿಯಂತ್ರಿಸುವುದು, ಜನ ಹಿತ ಕಾಪಾಡುವುದು ನನ್ನ ಆದ್ಯತೆ. ಕೋವಿಡ್ ಎದುರಿಸುವುದು ಮೊದಲ ಕೆಲಸ. ಬೇರೆ ಯಾವುದರ ಬಗ್ಗೆಯೂ ನನ್ನ ಗಮನ ಇಲ್ಲ ಎಂದು ತಿಳಿಸಿದರು.

ಒಟ್ಟಾಗಿ ಸಚಿವರು, ಶಾಸಕರು ಕೋವಿಡ್ ಸಮಸ್ಯೆಯನ್ನು ಎದುರಿಸಬೇಕು. ಯಾರೋ ಒಬ್ಬರು ಎಲ್ಲಿಗೋ ಹೋಗಿ ಬಂದ್ರು ಅಂದ್ರೆ, ಅವರಿಗೆ ಉತ್ತರ ಕೊಟ್ಟು ಕಳಿಸಿದ್ದಾರಲ್ಲ ಎಂದು ನಾಯಕತ್ವ ಬದಲಾವಣೆ ಕಸರತ್ತಿಗಾಗಿ ದೆಹಲಿ ಹೋಗಿದ್ದವರಿಗೆ ಪರೋಕ್ಷವಾಗಿ ಸಿಎಂ ಟಾಂಗ್ ನೀಡಿದರು.

ಶಾಸಕಾಂಗ ಪಕ್ಷದ ಸಭೆ ನಡೆಸುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸಭೆ ಬಗ್ಗೆ ನಿಮ್ಮ ಜತೆ ಚರ್ಚಿಸುವ ಅಗತ್ಯ ಇಲ್ಲ ಎಂದು ತಿಳಿಸಿದರು.

 

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...