ಯಾವುದೇ ಅರ್ಹ ಬಿಪಿಎಲ್, ಎಪಿಎಲ್ ಕಾರ್ಡ್ಗಳನ್ನು ರದ್ದುಪಡಿಸುವುದಿಲ್ಲ: ಸಚಿವ ಕೆ.ಹೆಚ್.ಮುನಿಯಪ್ಪ
ಬೆಂಗಳೂರು: ಯಾವುದೇ ಅರ್ಹ ಬಿಪಿಎಲ್, ಎಪಿಎಲ್ ಕಾರ್ಡ್ಗಳನ್ನು ರದ್ದುಪಡಿಸುವುದಿಲ್ಲ ಎಂದು ಆಹಾರ ನಾಗರೀಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, 66% ಬಿಪಿಎಲ್ ಕಾರ್ಡ್ಗಳಲ್ಲಿ ಅನರ್ಹರನ್ನ ಮಾತ್ರ ಎಪಿಎಲ್ಗೆ ಸೇರಿಸಲಾಗಿದೆ. ತೆರಿಗೆ ಪಾವತಿದಾರರು, ಸರ್ಕಾರಿ ನೌಕರರ ಕುಟುಂಬಗಳ ಬಿಪಿಎಲ್ ಕಾರ್ಡ್ಗಳನ್ನ ಮಾತ್ರ ಎಪಿಎಲ್ಗೆ ಸೇರಿಸಲಾಗಿದೆ. ಅನರ್ಹ ಇರಬಹುದೆನ್ನುವ ಕಾರ್ಡ್ಗಳನ್ನ ಮಾತ್ರ ಅಮಾನತ್ತಿನಲ್ಲಿಡಲಾಗಿದೆ ಎಂದು ಹೇಳಿದರು.
ಇನ್ನೂ 7 ದಿನದೊಳಗೆ ಬಿಪಿಎಲ್ ಕಾರ್ಡ್ ರದ್ದಾದವರಿಗೆ ಅದೇ ಐಡಿಯಲ್ಲಿ ಲಾಗಿನ್ಗೆ ಅವಕಾಶ ಮಾಡಿಕೊಡುತ್ತೇವೆ. ತೆರಿಗೆದಾರರು ಹಾಗೂ ಸರ್ಕಾರಿ ನೌಕರರ ಕಾರ್ಡ್ ರದ್ದು ಮಾಡಿದ್ದೇವೆ ಹೊರತು ಬೇರೆಯವರ ಕಾರ್ಡ್ ಯಥಾವತ್ತಾಗಿ ಮುಂದುವರಿಯಲಿದೆ ಎಂದು ಸ್ಪಷ್ಟಪಡಿಸಿದರು.