No menu items!
7.8 C
Munich
Friday, May 22, 2026

ಯಾವುದೇ ಕಾರಣಕ್ಕೂ ನನ್ನ ನಿರ್ಧಾರದಿಂದ ಹಿಂದೆ ಸರಿಯಲ್ಲ !

Must read

ಶಿವಮೊಗ್ಗ: ಯಾವುದೇ ಕಾರಣಕ್ಕೂ ನನ್ನ ನಿರ್ಧಾರದಿಂದ ಹಿಂದೆ ಸರಿಯಲ್ಲ ಎಂದು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನನ್ನ ಹೋರಾಟ ಕುಟುಂಬ ರಾಜಕಾರಣ ವಿರುದ್ಧು. ಸಿಟಿ ರವಿ, ಬಸನಗೌಡ ಪಾಟೀಲ್ ಯತ್ನಾಳ, ನಳೀನ ಕುಮಾರ ಕಟೀಲು ಅವರಿಗೆ ಟಿಕೆಟ್ ನೀಡಿಲ್ಲ. ಪ್ರಧಾನಿ ಮೋದಿಯವರು ಕಾಂಗ್ರೆಸ್ ಪಕ್ಷದ ಕುಟುಂಬ ರಾಜಕಾರಣ ವಿರೋಧ ಮಾಡಿದರು.
ಆದರೆ ಕರ್ನಾಟಕದಲ್ಲಿ ಬಿ.ಎಸ್ ಯಡಿಯೂರಪ್ಪ ಅವರ ಪುತ್ರನಿಗೆ ಟಿಕೆಟ್ ನೀಡಿದ್ದಾರೆ ಎಂದು ಹೇಳಿದರು. ಹೀಗಾಗಿ ಪಕ್ಷೇತರ ಸ್ಪರ್ಧೆ ಮಾಡಿದ್ದೇನೆ. ಗೆದ್ದು ನರೇಂದ್ರ ಮೋದಿಯವರ ಕೈ ಬಲಪಡಿಸುತ್ತೇನೆ. ಕೇಂದ್ರದ ನಾಯಕರು ದೂರವಾಣಿ ಸಂಪರ್ಕ ಮಾಡಿದರೂ, ಸ್ಪಷ್ಟ ನಿರ್ಧಾರ ಹೇಳಿದ್ದೇನೆ. ಯಾವುದೇ ಕಾರಣಕ್ಕೂ ನನ್ನ ನಿರ್ಧಾರದಿಂದ ಹಿಂದೆ ಸರಿಯಲ್ಲ ಎಂದು ತಿಳಿಸಿದರು.

- Advertisement -spot_img

More articles

- Advertisement -spot_img

Latest article