ಯಾವುದೇ ಕ್ಷಣದಲ್ಲಿ ಆಸ್ಪತ್ರೆಯಿಂದ ನಟ ದರ್ಶನ್ ಡಿಸ್ಚಾರ್ಜ್!

Date:

ಯಾವುದೇ ಕ್ಷಣದಲ್ಲಿ ಆಸ್ಪತ್ರೆಯಿಂದ ನಟ ದರ್ಶನ್ ಡಿಸ್ಚಾರ್ಜ್!

ಬೆಂಗಳೂರು: ಕೊಲೆ ಕೇಸ್ನಲ್ಲಿ ಜೈಲು ಸೇರಿದ್ದ ನಟ ದರ್ಶನ್ ಬೇಲ್ ಪಡೆದು ಹೊರಗೆ ಬಂದಿದ್ದಾರೆ. ಪರಪ್ಪನ ಅಗ್ರಹಾರ ಜೈಲಿಂದ ಬಳ್ಳಾರಿ ಜೈಲಿಗೆ ದರ್ಶನ್ ಶಿಫ್ಟ್ ಆದ ಬಳಿಕ ನಟನಿಗೆ ಬೆನ್ನು ನೋವು ಹೆಚ್ಚಾಗಿತ್ತು. ಬೆನ್ನು ನೋವಿನ ಕಾರಣ ಹೇಳಿ ದರ್ಶನ್ ಮಧ್ಯಂತರ ಜಾಮೀನು ಪಡೆದು ಹೊರಗೆ ಬಂದ್ರು. ಒಂದೂವರೆ ತಿಂಗಳಿಂದ ದರ್ಶನ್ ಆಸ್ಪತ್ರೆಯಲ್ಲೇ ಇದ್ದಾರೆ.
ಡಿಸೆಂಬರ್ 13ರಂದು ಹೈಕೋರ್ಟ್ ದರ್ಶನ್ ಹಾಗೂ ಪವಿತ್ರಾ ಗೌಡ ಸೇರಿದಂತೆ ಕೆಲವರಿಗೆ ಜಾಮೀನು ಮಂಜೂರು ಮಾಡಿತ್ತು. ಆಸ್ಪತ್ರೆಯಲ್ಲಿದ್ದ ದರ್ಶನ್ ಜಾಮೀನು ಪ್ರಕ್ರಿಯೆ ಪೂರ್ಣಗೊಳಿಸಲು ಸಿಟಿ ಸಿವಿಲ್ ಕೋರ್ಟ್ಗೆ ತೆರಳಿದ್ರು. ಪ್ರಕ್ರಿಯೆ ಪೂರ್ಣಗೊಂಡ ಬಳಿಕ ನಟ ದರ್ಶನ್ ಮತ್ತೆ ಆಸ್ಪತ್ರೆ ದಾಖಲಾಗಿದ್ದರು.
ಇದೀಗ ಇಂದು BGS ಆಸ್ಪತ್ರೆಯಿಂದ ನಟ ದರ್ಶನ್ ಡಿಸ್ಚಾರ್ಜ್ ಆಗಲಿದ್ದಾರೆ. ಸರ್ಜರಿ ಇಲ್ಲದೇ ದರ್ಶನ್ ಇಂದೇ ಡಿಸ್ಚಾರ್ಜ್ ಆಗುತ್ತಿದ್ದು, ವೈದ್ಯರ ಸಲಹೆ ಮೇರೆಗೆ ಮನೆಯಲ್ಲೇ ಟ್ರೀಟ್ಮೆಂಟ್ ಪಡೆಯಲಿದ್ದಾರೆ ಎನ್ನಲಾಗಿದೆ. ದರ್ಶನ್ ಆಸ್ಪತ್ರೆಯಲ್ಲಿ ಫಿಜಿಯೋಥೆರಫಿ ಚಿಕಿತ್ಸೆಗೆ ಒಳಗಾಗಿದ್ದು ಮನೆಯಲ್ಲಿ ಅದನ್ನೇ ಮುಂದುವರೆಸಲಿದ್ದಾರೆ.
ಬೇಲ್ ಪ್ರಕ್ರಿಯೆ ಮುಗಿಸಲು ನಟ ದರ್ಶನ್ ಡಿ.16ರಂದು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ಗೆ ತರಳಿದ್ದರು. ಕೋರ್ಟ್ನಲ್ಲೂ ನಿಲ್ಲೋಕೂ ನಡೆದಾಡೋಕು ಆಗದೆ ಪರದಾಡ್ತಿದ್ರು. ಆ ಬಳಿಕ ಬೇಲ್ ಪ್ರಕ್ರಿಯೆ ಮುಗಿಸಿ ವಾಪಸ್ ಆಸ್ಪತ್ರೆಗೆ ದರ್ಶನ್ ತೆರಳಿದ್ದ ದರ್ಶನ್ ಇಂದು ಡಿಸ್ಚಾರ್ಜ್ ಆಗಲಿದ್ದಾರೆ.

Share post:

Subscribe

spot_imgspot_img

Popular

More like this
Related

ದ್ವೇಷ ಭಾಷಣ ಮಸೂದೆ ಜಾರಿಗೆ ಅಡ್ಡಿಯಾಗಲೆಂದೇ ರಾಜ್ಯಪಾಲರು ರಾಷ್ಟ್ರಪತಿಗಳಿಗೆ ಕಳುಹಿಸಿದ್ದಾರೆ:  ಸಚಿವ ಪರಮೇಶ್ವರ್ ಆರೋಪ

ದ್ವೇಷ ಭಾಷಣ ಮಸೂದೆ ಜಾರಿಗೆ ಅಡ್ಡಿಯಾಗಲೆಂದೇ ರಾಜ್ಯಪಾಲರು ರಾಷ್ಟ್ರಪತಿಗಳಿಗೆ ಕಳುಹಿಸಿದ್ದಾರೆ:  ಸಚಿವ...

ಕನಕಪುರ ಅಗ್ನಿ ಅವಘಡ: ಒಂದೇ ಕುಟುಂಬದ ಮೂವರು ಚಿಕಿತ್ಸೆ ಫಲಿಸದೆ ಸಾವು

ಕನಕಪುರ ಅಗ್ನಿ ಅವಘಡ: ಒಂದೇ ಕುಟುಂಬದ ಮೂವರು ಚಿಕಿತ್ಸೆ ಫಲಿಸದೆ ಸಾವು ರಾಮನಗರ:...

ನಿರ್ಮಲಾ ಸೀತಾರಾಮನ್ 9ನೇ ಬಜೆಟ್: ಆತ್ಮನಿರ್ಭರ, ವಿಕಸಿತ ಭಾರತಕ್ಕೆ ದಾರಿ: ಬಿ.ವೈ. ವಿಜಯೇಂದ್ರ

ನಿರ್ಮಲಾ ಸೀತಾರಾಮನ್ 9ನೇ ಬಜೆಟ್: ಆತ್ಮನಿರ್ಭರ, ವಿಕಸಿತ ಭಾರತಕ್ಕೆ ದಾರಿ: ಬಿ.ವೈ....

ಯುವಶಕ್ತಿ, ನಾರಿ ಶಕ್ತಿ, ರೈತರಿಗೆ ಆದ್ಯತೆ ನೀಡಿದ ಬಜೆಟ್: ಬಿ.ವೈ. ವಿಜಯೇಂದ್ರ ಶ್ಲಾಘನೆ

ಯುವಶಕ್ತಿ, ನಾರಿ ಶಕ್ತಿ, ರೈತರಿಗೆ ಆದ್ಯತೆ ನೀಡಿದ ಬಜೆಟ್: ಬಿ.ವೈ. ವಿಜಯೇಂದ್ರ...