ಯಾವುದೇ ಧಾರ್ಮಿಕ ವಿಧಿ-ವಿಧಾನಗಳಿಲ್ಲದೆ ವಿದ್ಯುತ್ ಚಿತಾಗಾರದಲ್ಲಿ ಗಿರೀಶ್ ಕಾರ್ನಾಡ್ ಅಂತ್ಯಸಂಸ್ಕಾರ !

Date:

ಬಹು ಅಂಗಾಂಗ ವೈಫಲ್ಯದಿಂದ ನಿಧನರಾದ ಜ್ಞಾನಪೀಠ ಪ್ರಶಸ್ತಿ ಪುರಸ್ಕøತ ಸಾಹಿತಿ ಗಿರೀಶ್ ಕಾರ್ನಾಡ್ ಅವರ ಅಂತ್ಯಸಂಸ್ಕಾರ ಯಾವುದೇ ಧಾರ್ಮಿಕ ವಿಧಿ-ವಿಧಾನಗಳಿಲ್ಲದೆ, ಸರಳವಾಗಿ ನೆರವೇರಲಿದೆ.

ಅವರ ಅಂತ್ಯಸಂಸ್ಕಾರವನ್ನು ಗಿರೀಶ್ ಕಾರ್ನಾಡ್‍ರ ಇಚ್ಛೆಯಂತೆ ಯಾವುದೇ ರೀತಿಯ ಧಾರ್ಮಿಕ ವಿಧಿವಿಧಾನಗಳನ್ನು ಅನುಸರಿಸದೆ ಸರಳವಾಗಿ ನೆರವೇರಿಸಲಾಗುವುದು. ಸಾರ್ವಜನಿಕರ ದರ್ಶನಕ್ಕೂ ಅವಕಾಶ ಇರುವುದಿಲ್ಲ ಎಂದು ಕಾರ್ನಾಡ್ ಅವರ ಆಪ್ತರಾದ ಕೆ.ಎಂ.ಚೈತನ್ಯ ತಿಳಿಸಿದ್ದಾರೆ.

ನಾನು ಇಹಲೋಕ ತ್ಯಜಿಸಿದ ನಂತರ ಯಾವುದೇ ರೀತಿಯ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸದೆ ಅಂತ್ಯಸಂಸ್ಕಾರವನ್ನು ನಡೆಸಬೇಕೆಂದು ತಮ್ಮ ಮಗನ ಬಳಿ ಕೇಳಿಕೊಂಡಿದ್ದರು.

ಹೀಗಾಗಿ ಅವರ ಇಚ್ಛೆಯಂತೆ ಅಂತ್ಯಸಂಸ್ಕಾರ ನೆರವೇರಿಸುತ್ತಿದ್ದೇವೆ.ಬೈಯ್ಯಪ್ಪನಹಳ್ಳಿ ಬಳಿ ಇರುವ ಕಲ್ಪಳ್ಳಿ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನೆರವೇರಲಿದ್ದು, ಅವರ ಅಂತಿಮ ದರ್ಶನ ಪಡೆಯಲು ಇಚ್ಛಿಸುವವರು ಅಲ್ಲಿಗೇ ಬಂದು ಪಡೆಯಬೇಕು ಅವರು ಮನವಿ ಮಾಡಿದ್ದಾರೆ.

ಸರ್ಕಾರಿ ಗೌರವಗಳು ಇದ್ಯಾವುದೂ ನಮಗೆ ಬೇಡ ಎಂದು ಹೇಳಿದ್ದರು. ಹಾಗಾಗಿ ಅವರ ಇಷ್ಟದಂತೆಯೇ ನೆರವೇರಿಸುತ್ತಿದ್ದೇವೆ. ಅವರ ಅಭಿಮಾನಿಗಳು, ಹಿತೈಷಿಗಳು, ಒಡನಾಡಿಗಳು, ರಾಜಕಾರಣಿಗಳು ಯಾರೇ ಆಗಲಿ ಚಿತಾಗಾರಕ್ಕೆ ಬರುವಂತೆ ಕೋರಿದ್ದಾರೆ.

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...