ಯಾವುದೇ ಧಾರ್ಮಿಕ ವಿಧಿ-ವಿಧಾನಗಳಿಲ್ಲದೆ ವಿದ್ಯುತ್ ಚಿತಾಗಾರದಲ್ಲಿ ಗಿರೀಶ್ ಕಾರ್ನಾಡ್ ಅಂತ್ಯಸಂಸ್ಕಾರ !

Date:

ಬಹು ಅಂಗಾಂಗ ವೈಫಲ್ಯದಿಂದ ನಿಧನರಾದ ಜ್ಞಾನಪೀಠ ಪ್ರಶಸ್ತಿ ಪುರಸ್ಕøತ ಸಾಹಿತಿ ಗಿರೀಶ್ ಕಾರ್ನಾಡ್ ಅವರ ಅಂತ್ಯಸಂಸ್ಕಾರ ಯಾವುದೇ ಧಾರ್ಮಿಕ ವಿಧಿ-ವಿಧಾನಗಳಿಲ್ಲದೆ, ಸರಳವಾಗಿ ನೆರವೇರಲಿದೆ.

ಅವರ ಅಂತ್ಯಸಂಸ್ಕಾರವನ್ನು ಗಿರೀಶ್ ಕಾರ್ನಾಡ್‍ರ ಇಚ್ಛೆಯಂತೆ ಯಾವುದೇ ರೀತಿಯ ಧಾರ್ಮಿಕ ವಿಧಿವಿಧಾನಗಳನ್ನು ಅನುಸರಿಸದೆ ಸರಳವಾಗಿ ನೆರವೇರಿಸಲಾಗುವುದು. ಸಾರ್ವಜನಿಕರ ದರ್ಶನಕ್ಕೂ ಅವಕಾಶ ಇರುವುದಿಲ್ಲ ಎಂದು ಕಾರ್ನಾಡ್ ಅವರ ಆಪ್ತರಾದ ಕೆ.ಎಂ.ಚೈತನ್ಯ ತಿಳಿಸಿದ್ದಾರೆ.

ನಾನು ಇಹಲೋಕ ತ್ಯಜಿಸಿದ ನಂತರ ಯಾವುದೇ ರೀತಿಯ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸದೆ ಅಂತ್ಯಸಂಸ್ಕಾರವನ್ನು ನಡೆಸಬೇಕೆಂದು ತಮ್ಮ ಮಗನ ಬಳಿ ಕೇಳಿಕೊಂಡಿದ್ದರು.

ಹೀಗಾಗಿ ಅವರ ಇಚ್ಛೆಯಂತೆ ಅಂತ್ಯಸಂಸ್ಕಾರ ನೆರವೇರಿಸುತ್ತಿದ್ದೇವೆ.ಬೈಯ್ಯಪ್ಪನಹಳ್ಳಿ ಬಳಿ ಇರುವ ಕಲ್ಪಳ್ಳಿ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನೆರವೇರಲಿದ್ದು, ಅವರ ಅಂತಿಮ ದರ್ಶನ ಪಡೆಯಲು ಇಚ್ಛಿಸುವವರು ಅಲ್ಲಿಗೇ ಬಂದು ಪಡೆಯಬೇಕು ಅವರು ಮನವಿ ಮಾಡಿದ್ದಾರೆ.

ಸರ್ಕಾರಿ ಗೌರವಗಳು ಇದ್ಯಾವುದೂ ನಮಗೆ ಬೇಡ ಎಂದು ಹೇಳಿದ್ದರು. ಹಾಗಾಗಿ ಅವರ ಇಷ್ಟದಂತೆಯೇ ನೆರವೇರಿಸುತ್ತಿದ್ದೇವೆ. ಅವರ ಅಭಿಮಾನಿಗಳು, ಹಿತೈಷಿಗಳು, ಒಡನಾಡಿಗಳು, ರಾಜಕಾರಣಿಗಳು ಯಾರೇ ಆಗಲಿ ಚಿತಾಗಾರಕ್ಕೆ ಬರುವಂತೆ ಕೋರಿದ್ದಾರೆ.

Share post:

Subscribe

spot_imgspot_img

Popular

More like this
Related

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..?

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂದುವರೆದ ಒಣ ಹವೆ: ಹವಾಮಾನ ಇಲಾಖೆ ಹೇಳಿದ್ದೇನು..? ಬೆಂಗಳೂರು:...

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ ಬೇಕು

ಕಾಳು ಮೆಣಸು ಯಾವೆಲ್ಲಾ ಸಮಸ್ಯೆಗೆ ಮನೆಮದ್ದಾಗಿ ಬಳಸಬಹುದು ಗೊತ್ತಾ? ನೀವು ತಿಳಿಯಲೇ...

World Cup 2025: ವಿಶ್ವ ಗೆದ್ದ ಭಾರತದ ವನಿತಾ ಪಡೆ..! ಇತಿಹಾಸ ಬರೆದ ಸಿಂಹಿಣಿಯರು

ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಏಕದಿನ ವಿಶ್ವಕಪ್ 2025ರ...

ರೌಡಿಗಳನ್ನು, ಗೂಂಡಾಗಳನ್ನು ಬಿಟ್ಟು ಜನರ ಆಸ್ತಿಗಳನ್ನು ಲಪಟಾಯಿಸುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

ರೌಡಿಗಳನ್ನು, ಗೂಂಡಾಗಳನ್ನು ಬಿಟ್ಟು ಜನರ ಆಸ್ತಿಗಳನ್ನು ಲಪಟಾಯಿಸುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ ಬೆಂಗಳೂರು: ರೌಡಿಗಳನ್ನು,...