ಯಾವ ಸಮಯದಲ್ಲಿ ನೃತ್ಯ ಮಾಡಬೇಕು ಎಂಬ ಪ್ರಜ್ಞೆ ಇರಬೇಕು: ಸಿಟಿ ರವಿ ವ್ಯಂಗ್ಯ

Date:

ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಹುದ್ದೇಯ ಬಗ್ಗೆ ಭಯ ಬೇಡ, ಸರ್ಕಾರ ಬೀಳಿಸಲು ನಾವು ಯಾರಿಗೂ ಹೇಳಿಕೊಟ್ಟಿಲ್ಲ ಧೈರ್ಯವಾಗಿರಿ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುರಿತು ಲೇವಡಿ ಮಾಡಿದರು. ಮಳೆಯ ಕೊರತೆಯಿಂದ ರೈತರಿಗೆ ಉಂಟಾಗಿರುವ ನಷ್ಟದ ಅಧ್ಯಯನಕ್ಕೆಂದು ಆಗಮಿಸಿದ್ದ ಅವರು ಶಿಡ್ಲಘಟ್ಟ ತಾಲೂಕಿನ ಇದ್ಲೂಡು ಗ್ರಾಮ ಸುತ್ತ ಮುತ್ತ ಬರ ವೀಕ್ಷಣೆ ಮಾಡಿ ರೈತರಿಂದ ಮಾಹಿತಿ ಪಡೆದರು. ನಂತರ ನಗರದ ಬಿಜೆಪಿ ಕಚೇರಿ ಸೇವಾಸೌಧದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು,
ಮುಖ್ಯಮಂತ್ರಿಗಳಿಗೆ ಸಿಎಂ ಹುದ್ದೆ ಕೈ ತಪ್ಪಲಿದೆ ಎಂಬ ಆತಂಕ ಶುರುವಾಗಿದೆ ಅವರ ಆತಂಕಕ್ಕೆ ಬಿಜೆಪಿಯ ನಾಯಕರ್ಯಾರು ಕಾರಣರಲ್ಲ ಎಂದು ಸ್ಪಷ್ಟ ಪಡಿಸಿದರು. ರಾಜ್ಯದಲ್ಲಿ ಬರ ಆವರಿಸಿದ್ದು, ರೈತರ ಬಗ್ಗೆ ಮುಖ್ಯಮಂತ್ರಿಗಳಿಗೆ ಕಾಳಜಿ ಇಲ್ಲ, ಇಂತಹ ಪರಿಸ್ಥಿತಿಯಲ್ಲಿ ಹಂಪಿಯಲ್ಲಿ ಮುಖ್ಯಮಂತ್ರಿ ತಾಳ ತಪ್ಪದಂತೆ ಡಾನ್ಸ್ ಮಾಡ್ತಾರೆ ಎಂದು ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು. ಸಿದ್ದರಾಮಯ್ಯ ಉತ್ತಮ ನೃತ್ಯಗಾರು ಅದರ ಬಗ್ಗೆ ನಮಗೆ ಮೆಚ್ಚುಗೆ ಇದೆ, ಆದರೆ ಯಾವ ಸಮಯದಲ್ಲಿ ನೃತ್ಯ ಮಾಡಬೇಕು ಎಂಬ ಪ್ರಜ್ಞೆ ಇರಬೇಕು ಎಂದು ವ್ಯಂಗ್ಯವಾಡಿದರು.

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...