ರಂಜಾನ್ ಹಬ್ಬಕ್ಕೆ ಪೊಲೀಸರಿಂದ ಕಿಟ್ ವಿತರಣೆ!

Date:

ದಾವಣಗೆರೆ: ರಂಜಾನ್ ಹಬ್ಬಕ್ಕೆ ದಾವಣಗೆರೆ ಪೊಲೀಸರು 50ಕ್ಕೂ ಹೆಚ್ಚು ಕುಟುಂಬಗಳಿಗೆ ಫುಡ್ ಕಿಟ್ ವಿತರಣೆ ಮಾಡಿದ್ದಾರೆ.

ಲಾಕ್‍ಡೌನ್ ನಿಂದ ಕೂಲಿ ಮಾಡಿ ಜೀವನ ಸಾಗಿಸುತ್ತಿರುವ ಜನರಿಗೆ ಒಂದೊತ್ತಿನ ಊಟಕ್ಕೂ ಸಹ ಕಷ್ಟವಾಗುತ್ತದೆ. ರಂಜಾನ್ ಹಬ್ಬ ಬಂದಿದ್ದು, ಕೂಲಿ ಮಾಡುವ ಜನರು ಸಾಕಷ್ಟು ತೊಂದರೆ ಪಡುವಂತಾಗಿದೆ. ಇವರ ಕಷ್ಟವನ್ನು ನೋಡಿದ ದಾವಣಗೆರೆಯ ಅಜಾದ್ ನಗರ ಪೊಲೀಸ್ ಠಾಣೆಯ ಇನ್‍ಸ್ಪೆಕ್ಟರ್ ಶೈಲಜಾ ತಮ್ಮ ಸ್ವಂತ ಖರ್ಚಿನಲ್ಲಿ 50ಕ್ಕೂ ಹೆಚ್ಚು ಕುಟುಂಬಗಳಿಗೆ ಆಹಾರದ ಕಿಟ್ ವಿತರಣೆ ಮಾಡಿದರು.

ಅಜಾದ್ ನಗರ, ಭಾಷಾ ನಗರ ಸೇರಿದಂತೆ ಹಲವು ಕಡೆಗಳಲ್ಲಿ ಕೂಲಿ ಮಾಡಿ ಜೀವನ ನಡೆಸುವ ಜನರೇ ಜಾಸ್ತಿ. ಈಗ ರಂಜಾನ್ ಹಬ್ಬ ಬಂದಿದ್ದರಿಂದ ಕೂಲಿ ಇಲ್ಲದೆ ಹಬ್ಬವನ್ನು ಆಚರಣೆ ಮಾಡಲು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದರು. ಇದನ್ನು ಮನಗಂಡ ಪಿಎಸ್‍ಐ ಶೈಲಜಾ ರಂಜಾನ್ ಹಬ್ಬಕ್ಕೆ ಬೇಕಾಗುವ ಆಹಾರ ಸಾಮಗ್ರಿಗಳ ಕಿಟ್ ವಿತರಣೆ ಮಾಡಿದರು.

ಪೊಲೀಸ್ ಅಧಿಕಾರಿಗಳ ಮೂಲಕ ಐವತ್ತಕ್ಕೂ ಹೆಚ್ಚು ಜನರಿಗೆ ಕಿಟ್ ವಿತರಣೆ ಮಾಡಿದರು. ಅಜಾದ್ ನಗರ ಪೊಲೀಸರ ಈ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಜನರು ಪ್ರಶಂಸೆ ವ್ಯಕ್ತವಾಗಿದೆ.

 

Share post:

Subscribe

spot_imgspot_img

Popular

More like this
Related

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು!

ಪಬ್‌ನಲ್ಲಿ ಆರ್ಯನ್ ಖಾನ್ ದುರ್ವರ್ತನೆ ಆರೋಪ: ತನಿಖೆ ಮುಂದುವರಿಸಿದ ಪೊಲೀಸರು! ಬೆಂಗಳೂರು: ಬಾಲಿವುಡ್...

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ

ಕರ್ನಾಟಕದ ಹಲವು ಭಾಗಗಳಲ್ಲಿ ಒಣ ಹವೆ; ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ ಬೆಂಗಳೂರು:...

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ

ಹೈದರಾಬಾದ್‌ಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ: ಅಹಮದಾಬಾದ್ʼನಲ್ಲಿ ತುರ್ತು ಭೂಸ್ಪರ್ಶ ಹೈದರಾಬಾದ್:...

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ: ಡಿ.ಕೆ.ಶಿವಕುಮಾರ್

ಮಹಿಳೆಯರಿಗೆ ಉಪಕಾರ ಸ್ಮರಣೆ ಇದೆ ಎಂದು ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ:...