ರಂಜಾನ್ ಹಬ್ಬಕ್ಕೆ ಪೊಲೀಸರಿಂದ ಕಿಟ್ ವಿತರಣೆ!

Date:

ದಾವಣಗೆರೆ: ರಂಜಾನ್ ಹಬ್ಬಕ್ಕೆ ದಾವಣಗೆರೆ ಪೊಲೀಸರು 50ಕ್ಕೂ ಹೆಚ್ಚು ಕುಟುಂಬಗಳಿಗೆ ಫುಡ್ ಕಿಟ್ ವಿತರಣೆ ಮಾಡಿದ್ದಾರೆ.

ಲಾಕ್‍ಡೌನ್ ನಿಂದ ಕೂಲಿ ಮಾಡಿ ಜೀವನ ಸಾಗಿಸುತ್ತಿರುವ ಜನರಿಗೆ ಒಂದೊತ್ತಿನ ಊಟಕ್ಕೂ ಸಹ ಕಷ್ಟವಾಗುತ್ತದೆ. ರಂಜಾನ್ ಹಬ್ಬ ಬಂದಿದ್ದು, ಕೂಲಿ ಮಾಡುವ ಜನರು ಸಾಕಷ್ಟು ತೊಂದರೆ ಪಡುವಂತಾಗಿದೆ. ಇವರ ಕಷ್ಟವನ್ನು ನೋಡಿದ ದಾವಣಗೆರೆಯ ಅಜಾದ್ ನಗರ ಪೊಲೀಸ್ ಠಾಣೆಯ ಇನ್‍ಸ್ಪೆಕ್ಟರ್ ಶೈಲಜಾ ತಮ್ಮ ಸ್ವಂತ ಖರ್ಚಿನಲ್ಲಿ 50ಕ್ಕೂ ಹೆಚ್ಚು ಕುಟುಂಬಗಳಿಗೆ ಆಹಾರದ ಕಿಟ್ ವಿತರಣೆ ಮಾಡಿದರು.

ಅಜಾದ್ ನಗರ, ಭಾಷಾ ನಗರ ಸೇರಿದಂತೆ ಹಲವು ಕಡೆಗಳಲ್ಲಿ ಕೂಲಿ ಮಾಡಿ ಜೀವನ ನಡೆಸುವ ಜನರೇ ಜಾಸ್ತಿ. ಈಗ ರಂಜಾನ್ ಹಬ್ಬ ಬಂದಿದ್ದರಿಂದ ಕೂಲಿ ಇಲ್ಲದೆ ಹಬ್ಬವನ್ನು ಆಚರಣೆ ಮಾಡಲು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದರು. ಇದನ್ನು ಮನಗಂಡ ಪಿಎಸ್‍ಐ ಶೈಲಜಾ ರಂಜಾನ್ ಹಬ್ಬಕ್ಕೆ ಬೇಕಾಗುವ ಆಹಾರ ಸಾಮಗ್ರಿಗಳ ಕಿಟ್ ವಿತರಣೆ ಮಾಡಿದರು.

ಪೊಲೀಸ್ ಅಧಿಕಾರಿಗಳ ಮೂಲಕ ಐವತ್ತಕ್ಕೂ ಹೆಚ್ಚು ಜನರಿಗೆ ಕಿಟ್ ವಿತರಣೆ ಮಾಡಿದರು. ಅಜಾದ್ ನಗರ ಪೊಲೀಸರ ಈ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಜನರು ಪ್ರಶಂಸೆ ವ್ಯಕ್ತವಾಗಿದೆ.

 

Share post:

Subscribe

spot_imgspot_img

Popular

More like this
Related

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಅರಣ್ಯ ಸಚಿವರ ಜತೆ ಮಹತ್ವದ ಮಾತುಕತೆ ನಡೆಸಿದ ಹೆಚ್.ಡಿ. ಕುಮಾರಸ್ವಾಮಿ ನವದೆಹಲಿ:...

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ

ಅಬಕಾರಿ ಸಚಿವರ ರಾಜೀನಾಮೆ ಪಡೆದು ತನಿಖೆ ನಡೆಸಲಿ: ಬಿ.ವೈ. ವಿಜಯೇಂದ್ರ ಒತ್ತಾಯ ಬೆಂಗಳೂರು:...

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ!

ಗರ್ಭಾವಸ್ಥೆಯಲ್ಲಿ ಕಂಡುಬರುವ ಖಿನ್ನತೆ ತಡೆಯಲು ಈ ರೀತಿ ಮಾಡಿ! ಗರ್ಭಾವಸ್ಥೆಯಲ್ಲಿ ಮಹಿಳೆ ಅನುಭವಿಸುವ...

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ

ತೀರ್ಪು ವಿಳಂಬಕ್ಕೆ ಸುಪ್ರೀಂ ಕೋರ್ಟ್ ಕಿಡಿ: ಹೈಕೋರ್ಟ್ಗಳ ಕಾರ್ಯವೈಖರಿಯ ಮೇಲೆ ಅಸಮಾಧಾನ ನವದೆಹಲಿ:...