ರಮೇಶ್ ಜಾರಕಿಹೊಳಿ ಬೆಂಬಲಿಗರಿಂದ ಬಸ್ ಗಳಿಗೆ ಕಲ್ಲು ತೂರಾಟ

Date:

ಬೆಳಗಾವಿ : ರಮೇಶ ಜಾರಕಿಹೊಳಿ‌ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಅವರ ಬೆಂಬಲಿಗರೆನ್ನಲಾದ ಕೆಲವರು ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯ 8ಕ್ಕೂ ಹೆಚ್ಚು ಬಸ್​ಗಳ ಮೇಲೆ‌ ಕಲ್ಲು ತೂರಾಟ ನಡೆಸಿದ್ದಾರೆ ಎನ್ನಲಾಗ್ತಿದೆ.

ಗೋಕಾಕ್ ನಗರದ ಕೇಂದ್ರ ಬಸ್ ನಿಲ್ದಾಣಲ್ಲಿ ಪ್ರಯಾಣಿಕರನ್ನು ತುಂಬಿಕೊಂಡು ನಿಂತಿದ್ದ ಬಸ್​ಗಳ ಮೇಲೆ ಏಕಾಏಕಿ 10ಕ್ಕೂ ಹೆಚ್ಚು ಬೈಕ್​ಗಳಲ್ಲಿ ಬಂದ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ. ಇದರಿಂದ ಬಸ್​ನ ಹಿಂಬದಿಯ ಹಾಗೂ ಮುಂಬದಿಯ ಗಾಜುಗಳು ಪುಡಿ ಪುಡಿಯಾಗಿವೆ. ಅದೃಷ್ಟವಶಾತ್ ಬಸ್​ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಸಮಸ್ಯೆಯಾಗಿಲ್ಲ.

ಕೂಡಲೇ ಬಸ್​ನಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಿ ಬೇರೆ ಬಸ್​ಗಳಲ್ಲಿ ಪೊಲೀಸ್​ ಭದ್ರತೆಯೊಂದಿಗೆ ಕಳುಹಿಸಲಾಗಿದೆ. ಇತ್ತ ಕಲ್ಲು ತೂರಾಟ ನಡೆಸಿ ಪರಾರಿಯಾಗಿರುವ ಕಿಡಿಗೇಡಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಬೈಲಹೊಂಗಲ, ಗೋಕಾಕ್, ಬೆಳಗಾವಿ, ಅಥಣಿ, ನಿಪ್ಪಾಣಿ ಹಾಗೂ ಕಾಗವಾಡ ಸೇರಿದಂತೆ ವಿವಿಧ ಮಾರ್ಗಗಳಿಗೆ ಸಂಚರಿಸುತ್ತಿದ್ದ ಬಸ್​ಗಳನ್ನು ಗೋಕಾಕ್ ಡಿಪೋದಲ್ಲಿ ನಿಲ್ಲಿಸಲಾಗಿತ್ತು. ಬಸ್​ಗಳ ಮೇಲೆ ಕಲ್ಲು ತೂರಾಟ ನಡೆಯಲು ಪೊಲೀಸರ ನಿರ್ಲಕ್ಷ್ಯವೇ ಕಾರಣ ಎನ್ನಲಾಗುತ್ತಿದೆ. ಪೊಲೀಸರ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...