No menu items!
9.2 C
Munich
Friday, May 1, 2026

ರಸ್ತೆಗುಂಡಿ ಸಮಸ್ಯೆ ಬಗೆಹರಿಸಲು ನಾವು ಬದ್ಧ: ಡಿಸಿಎಂ ಡಿ.ಕೆ.ಶಿವಕುಮಾರ್

Must read

ರಸ್ತೆಗುಂಡಿ ಸಮಸ್ಯೆ ಬಗೆಹರಿಸಲು ನಾವು ಬದ್ಧ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: “ರಸ್ತೆಗುಂಡಿ ಸಮಸ್ಯೆ ಬಗೆಹರಿಸಲು ನಾವು ಬದ್ಧವಾಗಿದ್ದು, ಸಮಾರೋಪಾದಿಯಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ. ರಾಜಕೀಯ ಮಾಡುವವರು ಮಾಡಲಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯಿಸಿದರು.
“ಯಾರೂ ಸಹ ಉದ್ದೇಶಪೂರ್ವಕವಾಗಿ ರಸ್ತೆಗುಂಡಿಗಳನ್ನು ಮಾಡುವುದಿಲ್ಲ. ಅತಿಯಾದ ಮಳೆ ಬಿದ್ದ ಕಾರಣಕ್ಕೆ ಗುಂಡಿಗಳಾಗಿವೆ. 7 ಸಾವಿರಕ್ಕೂ ಹೆಚ್ಚು ರಸ್ತೆಗುಂಡಿಗಳನ್ನು ಈಗಾಗಲೇ ಮುಚ್ಚಲಾಗಿದೆ. ಇನ್ನೂ 5 ಸಾವಿರದಷ್ಟು ಗುಂಡಿಗಳನ್ನು ಮುಚ್ಚಲು ಬಾಕಿಯಿದೆ. ಈ ಕಾರಣಕ್ಕೆ ಪೊಲೀಸ್ ಕಮಿಷನರ್ ಅವರಿಂದ ವರದಿ ಕೇಳಲಾಗಿದೆ. ಸಾರ್ವಜನಿಕರು ಸೇರಿದಂತೆ ಎಲ್ಲರೂ ಸಹ ರಸ್ತೆಗುಂಡಿಗಳು ಕಂಡರೆ ಗಮನಕ್ಕೆ ತರುವ ವ್ಯವಸ್ಥೆ ರೂಪಿಸಲಾಗಿದೆ” ಎಂದು ತಿಳಿಸಿದರು.

- Advertisement -spot_img

More articles

- Advertisement -spot_img

Latest article