ರಸ್ತೆ ಅಪಘಾತ: ಬೈಕ್ಗೆ ಲಾರಿ ಡಿಕ್ಕಿ ಹೊಡೆದು ದಂಪತಿ ದುರ್ಮರಣ!
ಕೊಪ್ಪಳ:- ರಸ್ತೆ ಅಪಘಾತದಲ್ಲಿ ಬೈಕ್ಗೆ ಲಾರಿ ಡಿಕ್ಕಿ ಹೊಡೆದು ಇಬ್ಬರು ದುರ್ಮರಣ ಹೊಂದಿದ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಕೆಸರಟ್ಟಿ ಗ್ರಾಮದ ಬಳಿ ಜರುಗಿದೆ.
ಕೂಲಿ ಕೆಲಸಕ್ಕೆ ಹೊರಟಿದ್ದ ದಂಪತಿಯ ಬೈಕ್ಗೆ ಲಾರಿ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. 38 ಮಂಜುನಾಥ ನಾಯಕ್ ಹಾಗೂ ಪತ್ನಿ ನೇತ್ರಾವತಿ ನಾಯಕ್ ಮೃತರು.
ಕೂಲಿ ಕೆಲಸಕ್ಕಾಗಿ ದಂಪತಿ ಗಂಗಾವತಿಗೆ ಹೊರಟಿದ್ದರು. ಈ ವೇಳೆ ಲಾರಿ ಡಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಗಂಗಾವತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.