‘ರಾಜಕೀಯ ಕೊಳಚೆಯಲ್ಲಿ ನಿಂತು ವಾಸನೆ ಎಂದು ಹೇಳೋದ್ರಲ್ಲಿ ಅರ್ಥವಿಲ್ಲ’ !?

Date:

ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ನಂತರ ಶಾಸಕ ಸ್ಥಾನಕ್ಕೆ ನೀಡಲಾಗಿರುವ ರಾಜೀನಾಮೆ ಪತ್ರಗಳ ಕುರಿತು ನಿರ್ಧಾರ ಪ್ರಕಟಿಸುವುದಾಗಿ ಸ್ಪೀಕರ್ ರಮೇಶ್‍ಕುಮಾರ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ಎಂದರೆ ಕೊಳಚೆ ಪ್ರದೇಶದಲ್ಲಿ ನಿಂತು ವಾಸನೆ ಎಂದು ಹೇಳುವುದರಲ್ಲಿ ಅರ್ಥವಿಲ್ಲ. ಹಾಗಾಗಿ ರಾಜಕೀಯ ಎಂಬ ಕೊಳಚೆಪ್ರದೇಶದಲ್ಲಿರುವ ನಾನು ಎಲ್ಲ ಪರಿಸ್ಥಿತಿಗಳಿಗೂ ಹೊಂದಿಕೊಂಡು ಹೋಗಬೇಕಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ಶಾಸಕರ ರಾಜೀನಾಮೆ ಅತ್ಯಂತ ಕೆಟ್ಟ ಬೆಳವಣಿಗೆ. ಜನ ಸಾಮಾನ್ಯರಿಗೆ ಶಾಸಕರನ್ನು ಆಯ್ಕೆ ಮಾಡಿ ಕಳುಹಿಸುವ ಅರ್ಧ ಭಾಗದ ಅಧಿಕಾರವನ್ನು ಅಷ್ಟೇ ನೀಡಿದ್ದೇವೆ. ಅವರನ್ನು ಸರಿಯಾಗಿ ಕೆಲಸ ಮಾಡದಿದ್ದಾಗ ವಾಪಸ್ ಕರೆಸಿಕೊಳ್ಳುವ ಅಧಿಕಾರ ಅವರಿಗಿಲ್ಲ.

ಶಾಸಕರನ್ನು ಆರಿಸಿಕಳುಹಿಸುವುದು ಜನಸಾಮಾನ್ಯರು. ಶಾಸಕರ ಸ್ಥಾನಕ್ಕೆ ರಾಜೀನಾಮೆ ನೀಡಿದಾಗ ಜನರ ಅಭಿಪ್ರಾಯ ಆಲಿಸುವುದು ಬಹಳ ಮುಖ್ಯವಾಗಿರುತ್ತದೆ. ಹೀಗಾಗಿ ನಾನು ಜನಸಾಮಾನ್ಯರ ಅಭಿಪ್ರಾಯವನ್ನ ಕೇಳುತ್ತೇನೆ ಎಂದರು.

ಇತ್ತೀಚಿನ ದಿನಗಳಲ್ಲಿ ರಾಜಕೀಯ ಎಂಬುದು ಮದುವೆಯಂತಾಗಿದೆ. ಮದುವೆಯಲ್ಲಿ ತಾಳಿ ಕಟ್ಟುವುದು, ಪುರೋಹಿತ ಹೇಳಿದ ಮಂತ್ರ ಅರ್ಥ ಮಾಡಿಕೊಳ್ಳುವುದು ಪ್ರಮುಖವಾಗಬೇಕು. ಆದರೆ ವಾದ್ಯ, ತಾಳಮೇಳ ಅಡುಗೆಯವರೇ ಮದುವೆಯಲ್ಲಿ ಪ್ರಮುಖರಾಗುತ್ತಿದ್ದಾರೆ.

ಮದುವೆಗೆ ಬಂದ ಜನ ವರ ತಾಳಿ ಕಟ್ಟಿದ್ದನಾ , ಪುರೋಹಿತರ ಮಂತ್ರ ಅರ್ಥವಾಯಿತೋ ಇಲ್ಲವೋ ಎಂಬ ಯಾವುದನ್ನೂ ಗಮನಿಸುವುದಿಲ್ಲ. ಅಕ್ಷತೆ ಹಾಕುವಷ್ಟು ವ್ಯವಧಾನ ಜನರಿಗಿಲ್ಲ. ತಾಳಮೇಳಗಳ ಸದ್ದೆ ಜಾಸ್ತಿಯಾಗಿರುತ್ತದೆ. ಆಡಂಬರವೇ ಹೆಚ್ಚಾಗಿದ್ದು, ಸಂಪ್ರದಾಯದ ಮದುವೆ ನಶಿಸಿ ಹೋಗಿದೆ. ಅದೇ ರೀತಿ ಪ್ರಜಾಪ್ರಭುತ್ವದಲ್ಲಿ ವಿಧಾನಮಂಡಲದ ಚರ್ಚೆಗಳು ನಗಣ್ಯವಾಗುತ್ತಿವೆ.

ಜನಸಾಮಾನ್ಯರ ಸಮಸ್ಯೆಗಳಿಗಿಂತಲೂ ರಾಜಕೀಯ ಚರ್ಚೆಗಳೇ ಹೆಚ್ಚಾಗುತ್ತಿದೆ ಎಂದು ವಿಷಾದಿಸಿದರು. ಶಾಸಕರ ರಾಜೀನಾಮೆ ವಿಷಯದಲ್ಲಿ ಕಾನೂನಾತ್ಮಕವಾಗಿ ಜನಸಾಮಾನ್ಯರ ಅಭಿಪ್ರಾಯದಂತೆ ನಿರ್ಧಾರ ತೆಗೆದುಕೊಳ್ಳುತ್ತೇನೆ. ಹೇಳಿದಂತೆ ನಡೆದುಕೊಳ್ಳುವುದು ನನ್ನ ಹವ್ಯಾಸ. ಶನಿವಾರ 11.30ರವರೆಗೆ ಕಚೇರಿಯಲ್ಲಿದ್ದೆ. ನಾನು ಹೊರಟ ಮೇಲೆ ಶಾಸಕರು ಕಚೇರಿಗೆ ಬಂದಿದ್ದಾರೆ. ಅದಕ್ಕೂ ಮೊದಲು ಯಾರು ನನ್ನನ್ನು ಸಂಪರ್ಕಿಸಿರಲಿಲ್ಲ.

Share post:

Subscribe

spot_imgspot_img

Popular

More like this
Related

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಬೆಂಗಳೂರು: ನಿಷ್ಠಾವಂತ ರಾಜಕಾರಣಿಯಾಗಿದ್ದ...

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌ ಬೆಂಗಳೂರು:...

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್...

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ ವಿಜಯಪುರ: ವಿಜಯಪುರ ನಗರದಲ್ಲಿ ಮತ್ತೊಮ್ಮೆ ಭೂಕಂಪನದ...