ರಾಜಕೀಯ ಲಾಭಕ್ಕೆ ಪ್ರಧಾನಿ ನರೇಂದ್ರ ಮೊದಿ ಅವರು ತನ್ನ ಮುಗ್ದ ಹೆಂಡತಿಯನ್ನು ಬಿಟ್ಟು ಬಂದಿದ್ದಾರೆ ಎಂದು ಬಹುಜನ ಸಮಾಜವಾದಿ ಪಕ್ಷದ ನಾಯಕಿ ಮಾಯಾವತಿ ಅವರು ಪ್ರಧಾನಿ ಮೋದಿ ವಿರುದ್ಧ ವೈಯ್ಯಕ್ತಿಕ ನಿಂದನೆ ಮಾಡಿದರು.
ರಾಜಸ್ಥಾನದ ಅಲ್ವಾರ್ ನಲ್ಲಿ ದಲಿತ ಮಹಿಳೆ ಮೇಲೆ ನಡೆದ ಅತ್ಯಾಚಾರ ಪ್ರಕರಣ ಸಂಬಂಧ ಮಾಯಾವತಿ ವಾಕ್ಸಮರ ನಡೆಸಿದರು. ಮೋದಿ ಅವರು ಅಲ್ವಾರ್ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ರಾಜಕೀಯ ಮಾಡುತ್ತಿದ್ದಾರೆ.
ಚುನಾವಣೆಯಲ್ಲಿ ಅವರ ಪಕ್ಷಕ್ಕೆ ಲಾಭವಾಗುತ್ತದೆ ಎನ್ನುವುದು ಅವರ ಲೆಕ್ಕಾಚಾರವಾಗಿದೆ ಎಂದರು.ರಾಜಕೀಯ ಲಾಭಕ್ಕಾಗಿ ಪತ್ನಿಯನ್ನೇ ಬಿಟ್ಟುಬಂದಿರುವ ಮೋದಿ ಅವರು ಇತರೆ ಮಹಿಳೆಯರನ್ನು ಗೌರವಿಸಲು ಹೇಗೆ ಸಾಧ್ಯ ಎಂದರು.