ರಾಜಿಯಾಗೋ ಪ್ರಶ್ನೆಯೇ ಇಲ್ಲ ಎಂದ ಉಮಾಪತಿ

Date:

ಬೆಂಗಳೂರು: ನಟ ದರ್ಶನ್ ಹೆಸರಿನಲ್ಲಿ ವಂಚನೆ ಯತ್ನ ಪ್ರಕರಣದ ಗೊಂದಲಕ್ಕೆ ಇಂದು ನಿರ್ಮಾಪಕ ಉಮಾಪತಿ ಬನಶಂಕರಿಯಲ್ಲಿ ತೆರೆ ಎಳೆದಿದ್ದಾರೆ.

ಬನಶಂಕರಿ ದೇವಸ್ಥಾನದ ದರ್ಶನ ಮುಗಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ನಿರ್ಮಾಪಕ ಉಮಾಪತಿ ಅವರು, ನಟ ದರ್ಶನ್ ಹೆಸರಲ್ಲಿ 25 ಕೋಟಿ ವಂಚನೆ ಯತ್ನ ಪ್ರಕರಣ ಸಂಬಂಧ ರಾಜಿ ಪ್ರಶ್ನೆಯೇ ಇಲ್ಲ. ಈ ಪ್ರಕರಣದಲ್ಲಿ ಕಾನೂನು ಹೋರಾಟ ಮಾಡುತ್ತೇನೆ. ನಾನು ಪ್ರಕರಣ ಸಂಬಂಧವಾಗಿ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ಕೊಟ್ಟಿದ್ದೇನೆ. ಈ ಕುರಿತು ತನಿಖೆ ನಡೆಯುತ್ತಿದ್ದು, ಕಾನೂನಿನ ರೀತಿಯಲ್ಲಿ ಬಗೆಹರಿಸಿಕೊಳ್ಳುತ್ತೇವೆ ಎಂದು ಹೇಳಿದರು.

ಪ್ರಕರಣದಲ್ಲಿ ನನ್ನ ತಪ್ಪು ಇದ್ದಿದ್ರೆ ನಾನು ದೂರು ಕೊಡುತ್ತಿರಲಿಲ್ಲ. ಮೈಸೂರು ಸಿಸಿಬಿ ಕಚೇರಿಗೆ ಹೋಗುತ್ತಿರಲಿಲ್ಲ. ಪ್ರಕರಣದಲ್ಲಿ ನಾನು ಯಾರ ಮೇಲೂ ಆರೋಪ ಮಾಡಿಲ್ಲ. ಅರುಣಾ ಕುಮಾರಿ ಮೇಲೆ ಆರೋಪ ಬಂದಿದೆ ಅದನ್ನು ಅವರು ಕಾನೂನು ರೀತಿಯಲ್ಲಿ ಬಗೆಹರಿಸಿಕೊಳ್ಳಲಿ. ಘಟನೆ ಸಂಬಂಧವಾಗಿ ಜಯನಗರ ಪೊಲೀಸ್ ಹಾಗೂ ಡಿಸಿಪಿ ಜೊತೆ ಮಾತನಾಡಲಾಗಿದೆ. ಈ ಕುರಿತು ನ್ಯಾಯಾಧೀಶರ ಸಲಹೆ ಪಡೆದು ಮುಂದುವರೆಯುತ್ತೇನೆ ಎಂದರು.

ಎಂ.ಜಿ ರೋಡ್‍ನಲ್ಲಿರೋ ಆಸ್ತಿ ವಿಚಾರಕ್ಕೆ ಇಷ್ಟೆಲ್ಲಾ ಆಗುತ್ತಿದೆ ಎಂದು ಮಾತನಾಡಿದ ಅವರು, ನಾವು ಸಿನಿಮಾ ಮಾಡಿದ್ದೇವೆ. ರಿಯಲ್ ಎಸ್ಟೇಟ್ ವ್ಯಾಪಾರ ಮಾಡಿಲ್ಲ. ದರ್ಶನ್ ಸಾರ್ ನನ್ನ ಬ್ಯಾನರ್‍ನಲ್ಲಿ ಒಂದು ಸಿನಿಮಾ ಮಾಡಿದ್ದರು. ಅವರಿಗೆ ಏನು ಕೊಡಬೇಕೋ ಅದನ್ನು ಕೊಟ್ಟಿದ್ದೇನೆ. ಆ ವಿಶ್ವಾಸ ಅವರಿಗೂ ಇದೆ, ನನಗೂ ಇದೆ. ಈ ವಿಚಾರದ ಬಗ್ಗೆ ನಾನು ಮತ್ತೆ ಅವರು ಎಲ್ಲಿಯೂ ಮಾತನಾಡಿಲ್ಲ. ಸುಳ್ಳು ಸುದ್ದಿಗಳಿಗೆ ಉತ್ತರ ನೀಡುವ ಅವಶ್ಯಕತೆ ನನಗಿಲ್ಲ. ಅದಕ್ಕೆ ನಾವು ಜವಾಬ್ದಾರನಲ್ಲ ಎಂದು ಸ್ಪಷ್ಟೀಕರಣ ಕೊಟ್ಟಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...