No menu items!
9.3 C
Munich
Wednesday, April 29, 2026

ರಾಜೀನಾಮೆ ನೀಡೋ ಪ್ರಶ್ನೆಯೇ ಇಲ್ಲ : ಬಿಎಸ್ ವೈ

Must read

ನವದೆಹಲಿ: ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ಅದು ಕೇವಲ ಗಾಳಿ ಸುದ್ದಿ, ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಕರ್ನಾಟಕದ ಭವನದಲ್ಲಿ ಹೇಳಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿಗೂ ಮುನ್ನ ಮಾಧ್ಯಮಗಳ ಜೊತೆ ಸಿಎಂ ಯಡಿಯೂರಪ್ಪ ಮಾತನಾಡಿದರು. ನಿನ್ನೆ ಪ್ರಧಾನಿಗಳನ್ನು ಭೇಟಿಯಾಗಿದ್ದು, ಆ ರೀತಿಯ ಮಾತುಕತೆಗಳು ನಡೆದಿಲ್ಲ. ನಾನು ರಾಜೀನಾಮೆಯನ್ನೂ ನೀಡಿಲ್ಲ. ರಾಜ್ಯದ ಅಭಿವೃದ್ಧಿ ಕುರಿತ ಮಾತನಾಡಿದ್ದು, ಆಗಸ್ಟ್ ಮೊದಲ ವಾರದಲ್ಲಿ ಮತ್ತೆ ದೆಹಲಿಗೆ ಬರುತ್ತಿದ್ದೇನೆ. ರಾಜೀನಾಮೆ ನೀಡುವ ಪ್ರಶ್ನೆ ಇಲ್ಲವೇ ಇಲ್ಲ ಎಂದು ಎಲ್ಲ ಗಾಳಿಸುದ್ದಿಗಳಿಗೆ ಮುಖ್ಯಮಂತ್ರಿಗಳು ತೆರೆ ಎಳೆದರು. ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ಅಮಿತ್ ಶಾ ಭೇಟಿ ಬಳಿಕ ಸಿಎಂ ಯಡಿಯೂರಪ್ಪ ರಾಜ್ಯಕ್ಕೆ ಹಿಂದಿರುಗಲಿದ್ದಾರೆ.

ಶುಕ್ರವಾರ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನಿವಾಸದಲ್ಲಿ ಮೋದಿಯವರನ್ನು ಭೇಟಿಯಾಗಿದ್ದರು. ಮೇಕೆದಾಟು ಯೋಜನೆಗೆ ಅನುಮತಿ, ಬೆಂಗಳೂರಿನಲ್ಲಿ ಅಮೆರಿಕ ರಾಯಭಾರಿ ಕಚೇರಿ ಸ್ಥಾಪನೆ, ಪೆರಿಫೆರಲ್ ರಿಂಗ್ ರೋಡ್‍ಗೆ ಕಾಮಗಾರಿಗೆ ಅನುದಾನ ನೀಡುವಂತೆ ಮನವಿ ಸಲ್ಲಿಸಿದ್ದು, ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ ಎಂದು ಹೇಳಿದ್ದರು. ಜೊತೆಗೆ ರಾಜ್ಯದ ನೂತನ ಸಚಿವರನ್ನು ಭೇಟಿಯಾಗಿ ಶುಭಾಶಯ ತಿಳಿಸಿದರು.

ನಾಯಕತ್ವ ಬದಲಾವಣೆ ವಿಚಾರ, ಸಂಪುಟ ಪುನಾರಚನೆ ವದಂತಿಗಳ ಮಧ್ಯೆ, ಮುಖ್ಯಮಂತ್ರಿ ಯಡಿಯೂರಪ್ಪ ಎರಡು ದಿನಗಳ ದೆಹಲಿ ಪ್ರವಾಸದಲ್ಲಿದ್ದಾರೆ. ಸಿಎಂ ಜೊತೆ ಪುತ್ರರಾದ ವಿಜಯೇಂದ್ರ, ರಾಘವೇಂದ್ರ ಹಾಗೂ ಲೆಹರ್ ಸಿಂಗ್ ಸೇರಿದಂತೆ 7 ಮಂದಿ ಜೊತೆಗಿದ್ದಾರೆ.

 

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article