ರಾಜು ತಾಳಿಕೋಟಿ ಇನ್ನಿಲ್ಲ

Date:

ಖ್ಯಾತ ರಂಗ ಕಲಾವಿದ, ನಟ, ರಂಗನಿರ್ದೇಶಕ ರಾಜು ತಾಳಿಕೋಟಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ರಾಜು ತಾಳಿಕೋಟಿ ಗ್ರಾಮೀಣ ಸೊಗಡಿನ ಪ್ರತಿಭೆ ಅಂದರೆ ತಪ್ಪಾಗಲಾರದು. ಕಲಿಯುಗದ ಕುಡುಕ ಸೇರಿದಂತೆ ಸಾಕಷ್ಟು ನಾಟಕಗಳು ಹಾಗೂ ಅವರ ನಟನೆಯಿಂದಲೆ ಖ್ಯಾತಿ ಗಳಿಸಿದ್ದರು.

ಶೂಟಿಂಗ್ ನ ವೇಳೆ ಹುಸಿದು ಬಿದ್ದಿದ್ದಾರೆ. ಅವರನ್ನ ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ಸೇರಿಸಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು ಆದರೇ ಚಿಕಿತ್ಸೆ ಫಲಿಸದೆ ಅಸುನೀಗಿದ್ದಾರೆ.

ಧಾರವಾಡ ರಂಗಾಯಣದ ನಿರ್ದೇಶಕರಾಗಿದ್ದ ಅವರು, ರಂಗಭೂಮಿ ಹಾಗೂ ಸಿನಿಮಾ ಲೋಕದಲ್ಲಿ ತಮ್ಮದೇ ಆದ ಗುರುತನ್ನು ಮೂಡಿಸಿದ್ದರು.

ಮಾಹಿತಿಯ ಪ್ರಕಾರ, ಶನಿವಾರ ಮಧ್ಯರಾತ್ರಿ (ಅಕ್ಟೋಬರ್ 12) ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾದರು.

ರಾಜು ತಾಳಿಕೋಟೆ ಅವರು ಮುಂದಿನ ಮೂರು ದಿನಗಳ ಕಾಲ ನಡೆಯಲಿದ್ದ ಚಲನಚಿತ್ರದ ಶೂಟಿಂಗ್‌ನಲ್ಲಿ ಭಾಗವಹಿಸಲು ತಯಾರಾಗಿದ್ದರು. ಅವರ ಅಕಾಲಿಕ ನಿಧನ ಚಿತ್ರತಂಡಕ್ಕೆ ಹಾಗೂ ಅಭಿಮಾನಿಗಳಿಗೆ ದೊಡ್ಡ ಆಘಾತವಾಗಿದೆ.

ಹಾಸ್ಯ ನಟನಾಗಿ ಮತ್ತು ರಂಗಕರ್ಮಿಯಾಗಿ ಗುರುತಿಸಿಕೊಂಡಿದ್ದ ರಾಜು ತಾಳಿಕೋಟೆ ಅವರು ‘ಮನಸಾರೆ’, ‘ಪಂಚರಂಗಿ’, ‘ಲೈಫು ಇಷ್ಟೇನೇ’, ‘ರಾಜಧಾನಿ’, ‘ಅಲೆಮಾರಿ’, ‘ಮೈನಾ’, ‘ಟೋಪಿವಾಲಾ’ ಸೇರಿದಂತೆ ಅನೇಕ ಕನ್ನಡ ಚಿತ್ರಗಳಲ್ಲಿ ನಟಿಸಿದ್ದರು.

Share post:

Subscribe

spot_imgspot_img

Popular

More like this
Related

ಸ್ಯಾಂಡಲ್ ವುಡ್ ಖ್ಯಾತ ಖಳನಟ ‘ಹರೀಶ್ ರಾಯ್’ ನಿಧನ

ಸ್ಯಾಂಡಲ್ ವುಡ್ ಖ್ಯಾತ ಖಳನಟ ‘ಹರೀಶ್ ರಾಯ್’ ನಿಧನ ಸ್ಯಾಂಡಲ್‌ವುಡ್‌ನ ಖ್ಯಾತ ನಟ...

ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರ : ರಾಜ್ಯ ಸರ್ಕಾರದ ಮೇಲ್ಮನವಿ ಅರ್ಜಿ ವಜಾ

ಸರ್ಕಾರಿ ಸ್ಥಳಗಳಲ್ಲಿ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ವಿಚಾರ : ರಾಜ್ಯ ಸರ್ಕಾರದ...

ಮಹಿಳೆಯರೇ ಈ ವಿಷ್ಯ ತಿಳಿದುಕೊಳ್ಳಿ! ಚಳಿಗಾಲದಲ್ಲಿ ಬಟ್ಟೆಗಳನ್ನು ಬಿಸಿ ನೀರಿನಲ್ಲಿ ತೊಳೆಯಬೇಕಾ? ಇಲ್ಲಿ ತಿಳಿಯಿರಿ

ಮಹಿಳೆಯರೇ ಈ ವಿಷ್ಯ ತಿಳಿದುಕೊಳ್ಳಿ! ಚಳಿಗಾಲದಲ್ಲಿ ಬಟ್ಟೆಗಳನ್ನು ಬಿಸಿ ನೀರಿನಲ್ಲಿ ತೊಳೆಯಬೇಕಾ?...

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ. ಸುರೇಶ್ ವಾಗ್ದಾಳಿ

ಕಾಂಗ್ರೆಸ್ ಅವಧಿಯಲ್ಲಿ ಬೆಂಗಳೂರು ಅಭಿವೃದ್ಧಿಯಾಗಬಾರದು ಎಂದು ಬಿಜೆಪಿ ಕುತಂತ್ರ, ಅಸೂಯೆ: ಡಿ.ಕೆ....