ರಾಜ್ಯದಲ್ಲಿ ಅಧಿಕಾರದಲ್ಲಿರುವುದು ಪಂಚೇಂದ್ರಿಯಗಳಿಲ್ಲದ ಸರ್ಕಾರ ಎಂದ ರೇಣುಕಾಚಾರ್ಯ

admin
0 Min Read

ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರ ರೈತರ ಜೊತೆ ನಾವಿದ್ದೇವೆ ಎಂದು ಹೇಳಿಕೊಳ್ಳುತ್ತದೆ. ಆದರೆ, ರಾಜ್ಯದ ರೈತರು ಸಂಕಷ್ಟದಲ್ಲಿದ್ದಾಗ ಸರ್ಕಾರದ ನಾಯಕರು ರೆಸಾರ್ಟಿನಲ್ಲಿ ಇರುತ್ತಾರೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

ಕುಂದಗೋಳದಲ್ಲಿ ಮತಯಾಚಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಅಧಿಕಾರದಲ್ಲಿರುವುದು ಮಾನ-ಮರ್ಯಾದೆ, ಪಂಚೇಂದ್ರಿಯಗಳಿಲ್ಲದ ಸರ್ಕಾರ. ಇವರು ಯಾವುದೇ ರೈತರ ಸಾಲಮನ್ನಾ ಮಾಡಿಲ್ಲ. ಬರಗಾಲ ಸಮಸ್ಯೆಯನ್ನು ಸರಿಯಾಗಿ ನಿಭಾಯಿಸುತ್ತಿಲ್ಲ ಎಂದು ಆರೋಪಿಸಿದರು

Share This Article
Leave a Comment